ಚಿಕ್ಕಮಗಳೂರು : ಕಾಂಗ್ರೆಸ್ ನವರಿಗೆ ದೂರುವುದಕ್ಕೆ ಮೋದಿ ಬೇಕು. ಒಳ್ಳೆಯದಕ್ಕಾದರೆ ಮೋದಿ ಬೇಡ. ಗೂಸುಂಬೆ ರಾಜಕಾರಣದಿಂದ ಕಾಂಗ್ರೆಸ್ ಗೆ ಈ ಸ್ಥಿತಿ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಈಗ ಲಸಿಕೆ ರಾಜಕಾರಣ ಮಾಡುವುದು ಬೇಡ. ಈ ಹಿಂದೆ ಕಾಂಗ್ರೆಸ್ ನವರು ಲಸಿಕೆ ತೆಗೆದುಕೊಂಡರೆ ಮಕ್ಕಳಾಗಲ್ಲ ಎಂದಿದ್ದರು. ಆ ಸಮಯದಲ್ಲಿ ಸಿದ್ದರಾಮಯ್ಯ ಏನು ಹೇಳಿದ್ದರೆಂದು ಹೇಳಬೇಕಾ, ಡಿ ಕೆ ಶಿವಕುಮಾರ್ ಟ್ವೀಟ್ ತೋರಿಸಬೇಕಾ? ಜಾರ್ಖಂಡ್ ಆರೋಗ್ಯ ಸಚಿವರ ಹೇಳಿಕೆ ನೆನಪು ಮಾಡಬೇಕಾ ಎಂದು ಹೇಳಿದರು.
ಅವತ್ತು ಲಸಿಕೆ ವಿರುದ್ಧ ರಾಜಕಾರಣ ಮಾಡಿದರು. ಈಗ ಕಾಂಗ್ರೆಸ್ ನವರ ಎಡಬಿಡಂಗಿತನ ಹೇಗೆ ಎಂದರೆ ಪ್ರಧಾನಿ ಎಲ್ಲರಿಗೂ ಉಚಿತ ವಾಕ್ಸಿನ್ ಘೋಷಣೆ ಮಾಡಿದಾಗ ಕಾಂಗ್ರೆಸ್ ನವರು ಥ್ಯಾಂಕ್ಯೂ ಸುಪ್ರೀಂ ಕೋರ್ಟ್ ಎಂದರು. ಉಚಿತ ಲಸಿಕೆಯ ಕ್ರೆಡಿಟ್ ಮೋದಿ, ಬಿಜೆಪಿಗೆ ಹೋಗಬಹುದು ಅಂತ ಥ್ಯಾಂಕ್ಯೂ ಸುಪ್ರೀಂ ಕೋರ್ಟ್ ಅಂತಾ ರಾಜಕಾರಣ ಮಾಡಿದರು ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…