ಬೆಂಗಳೂರು: ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆ ನೋಡಿ ಬಿಜೆಪಿ ಮತ್ತು ಜೆಡಿಎಸ್ ಗೆ ಭೀತಿ ಶುರುವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಪ್ರಜಾಧ್ವನಿ ಯಾತ್ರೆಗೆ ಸೇರುತ್ತಿರುವ ಜನ ನೋಡಿದರೆ ಅದು ಸಾಬೀತಾಗುತ್ತಿದೆ. ಕಾಂಗ್ರೆಸ್ ನವರು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡ್ತಾ ಬಂದಿದ್ದೇವೆ ಎಂದರು.
ಸೋಮವಾರ ಚಿತ್ರದುರ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ. ನಾನು, ಸಲೀಂ ಅಹ್ಮದ್, ಪರಮೇಶ್ವರ್ ಹಾಗೂ ನಾರಾಯಣ ಸ್ವಾಮಿ ಅವರು ಕಾಂಗ್ರೆಸ್ ಕಚೇರಿಯಿಂದ ತೆರಳುತ್ತಿದ್ದೇವೆ. ಉಳಿದ ನಾಯಕರು ನೇರವಾಗಿ ಅಲ್ಲಿಗೆ ಬರಲಿದ್ದಾರೆ.
ಇದಾದ ನಂತರ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಲ್ಲಿಂದ ಹೊಸದುರ್ಗ, ಹೊಳಲ್ಕೆರೆ ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳುತ್ತೇವೆ. ನಂತರ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಅದಕ್ಕಾಗಿ ಎರಡು ಮೂರು ದಿನ ವಿರಾಮ ಇರಲಿದೆ. ನಂತರ ಮಂಡ್ಯ, ಮೈಸೂರು ಜಿಲ್ಲೆಯ ಕ್ಷೇತ್ರಗಳಿಗೆ ಭೇಟಿ ನೀಡುತ್ತೇವೆ ಎಂದು ತಿಳಿಸಿದರು.
ಯಾತ್ರೆ ಕುರಿತು ಅನ್ಯ ಪಕ್ಷಗಳ ನಾಯಕರ ಟೀಕೆ ಬಗ್ಗೆ ಕೇಳಿದಾಗ ‘ಸಿದ್ದರಾಮಯ್ಯ ಅವರು ನಿರಂತರ ಪ್ರವಾಸ ವೇಳಾಪಟ್ಟಿ ನಿಗದಿ ಮಾಡಿಕೊಂಡಿದ್ದಾರೆ. ನಾವು ಇಲ್ಲಿ ಹತ್ತಿರದ ಕ್ಷೇತ್ರಗಳಿಗೆ ಬೆಂಗಳೂರಿನಿಂದ ತೆರಳುತ್ತಿದ್ದೇವೆ. ನಾವು ಎಲ್ಲೆ ಹೋದರು ನಮಗೆ ಜನರಿಂದ ಸಿಗುತ್ತಿರುವ ಬೆಂಬಲಕ್ಕೆ ಮಾಧ್ಯಮಗಳ ಕ್ಯಾಮೆರಾಗಳು ಸಾಕ್ಷಿ ಎಂದು ಹೇಳಿದರು.
ನಮಗೆ ಸಿಗುತ್ತಿರುವ ಜನ ಬೆಂಬಲದಿಂದ ಬಿಜೆಪಿ ಹಾಗೂ ದಳದವರಿಗೆ ಭೀತಿ ಎದುರಾಗಿದೆ. ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡಿಕೊಂಡು ಬಂದಿದ್ದೇವೆ. ಇತ್ತೀಚೆಗೆ ಬಿಜೆಪಿ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದೆ. ನಾವು ಈ ಯೋಜನೆಗೆ ಹಣ ನೀಡಿದ್ದೇವೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬಹುದಾಗಿತ್ತು.
ಮೇಕೆದಾಟು ಯೋಜನೆಗೆ ಅನುಮತಿ ನೀಡಬಹುದಿತ್ತು. ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಾನು ನಿನ್ನೆ ತಾಂತ್ರಿಕ ತಂಡದ ಜತೆ ಸಭೆ ಮಾಡಿದ್ದೇನೆ. ನಾವು ರೈತರನ್ನು ರಕ್ಷಿಸುವ ಕಾರ್ಯಕ್ರಮ ಮಾಡುತ್ತೇವೆ. ಯಡಿಯೂರಪ್ಪ ಸೇರಿದಂತೆ ಯಾರೇ ನಮ್ಮ ಯಾತ್ರೆ ಪಂಚರ್ ಆಗಲಿದೆ ಎಂದು ಹೇಳಲಿ. ಅಂತಿಮವಾಗಿ ಯಾರು ಪಂಚರ್ ಆಗಲಿದ್ದಾರೆ ಎಂದು ಮತದಾರರು ತೀರ್ಮಾನ ಮಾಡುತ್ತಾರೆ’ ಎಂದು ತಿರುಗೇಟು ನೀಡಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…