ಬೆಳಗಾವಿ: ಸಚಿವ ಕೆ.ಎಸ್.ಈಶ್ವರಪ್ಪ ಹೆಸರು ಬರೆದಿಟ್ಟು ಉಡುಪಿಯ ಶಾಂಭವಿ ಲಾಡ್ಜ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ನೆರವೇರಿತು.
ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. ಸಂತೋಷ್ ಪಾಟೀಲ್ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಇಂದು ಗ್ರಾಮದಲ್ಲಿ ಮೂರು ಮದುವೆ ಇದ್ದ ಕಾರಣ ಅಂತ್ಯಕ್ರಿಯೆ ನೆರವೇರಿಸಿ ಎಂದು ಗ್ರಾಮಸ್ಥರು ಕೋರಿದರು. ಅಲ್ಲದೇ ಸಂಬಂಧಿಕರು ಕೂಡ ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದರು. ನ್ಯಾಯಕ್ಕಾಗಿ ಹೋರಾಟ ಮಾಡೋಣ. ಬಾಕಿ ಬಿಲ್ ಮಂಜೂರಾತಿ ಹಾಗೂ ಕುಟುಂಬಸ್ಥರ ಪರಿಹಾರಕ್ಕೆ ಸರ್ಕಾರಕ್ಕೆ ಆಗ್ರಹಿಸೋಣ. ಆದರೆ ಅಂತ್ಯಕ್ರಿಯೆ ನೆರವೇರಿಸಲು ಅನುವು ಮಾಡಿಕೊಡುವಂತೆ ಕೋರಿದರು. ಇದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು. ಬಳಿಕ ಗ್ರಾಮದಲ್ಲಿ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಜಮೀನಿಗೆ ತರಲಾಯಿತು. ಲಿಂಗಾಯತ ವಿಧಿವಿಧಾನಗಳ ಮೂಲಕ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…