ಚಿಕ್ಕಮಗಳೂರು: “ರಾಹುಲ್ ಗಾಂಧಿ ಕಾಲಿಟ್ಟ ಪ್ರದೇಶದಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಿದೆ. ಕಾಂಗ್ರೆಸ್ ನಾಯಕರಿಗೆ ಸಾಲು ಸಾಲು ಸೋಲಿನಿಂದ ಬುದ್ದಿಭ್ರಮಣೆಯಾಗಿದ್ದು, ಹೀಗಾಗಿ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ” ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಬ್ರಿಟಿಷರನ್ನು ದೇಶ ಬಿಟ್ಟು ಓಡಿಸಿದವರಿಗೆ ನರೇಂದ್ರ ಮೋದಿಯನ್ನು ಓಡಿಸುವುದು ಕಷ್ಟಕರವಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ”ರಾಹುಲ್ ಗಾಂಧಿಗೆ ಚಿಕಿತ್ಸೆಯ ನೀಡುವ ಅಗತ್ಯವಿದೆ. ಚುನಾವಣೆಗಾಗಿ ನೀರಿಗಿಳಿಯೋದು, ಹಾಡು ಹೇಳೋದು, ಡ್ಯಾನ್ಸ್ ಮಾಡುವುದನ್ನು ನೋಡಬಹುದಾಗಿದೆ. ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಾ ಹೋಗುತ್ತಿದೆ. ಗೆಲುವು ಕಾಣದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನವೂ ದೊರಕಿಲ್ಲ” ಎಂದು ಟೀಕಿಸಿದ್ದಾರೆ.
”ವಂಶಾಡಳಿತ, ದುರಾಡಳಿತ, ಭ್ರಷ್ಟಾಚಾರದಿಂದ ನೀವು ಜನರಿಂದಲೇ ನಾಶವಾಗಿದ್ದೀರಾ. ಮತ್ತೆ ಸರ್ವನಾಶವಾಗುತ್ತಿರಿ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ. ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡೊದನ್ನು ನೋಡಬಹುದಾಗಿದೆ ಎಂದು ವ್ಯಂಗ್ಯವಾಡಿದರು
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…