ಬೆಂಗಳೂರು: ಕಾಂಗ್ರೆಸ್ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಯಲ್ಲಿ ಮಹಿಳಾ ಮೀಸಲಿಗೆ ಸೋಲುಂಟಾಗಿರುವುದಕ್ಕೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಹೆಚ್ಡಿಕೆ, “1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ :
“ಅಂದು: ಹೆಚ್.ಡಿ.ದೇವೇಗೌಡ ಅವರ ನೇತೃತ್ವದ ಸಂಯುಕ್ತ ರಂಗ ಸರ್ಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು. ಇಂದು: ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ” ಎಂದು ಪೋಸ್ಟ್ ಮಾಡಿದ್ದಾರೆ.
“ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ :
“ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿರಾಶೆ ಬೇಕಿಲ್ಲ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ” ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…