Featured

ಕಾಂಗ್ರೆಸ್‌ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ – vishwanews24

ಕಾಂಗ್ರೆಸ್‌ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಯಲ್ಲಿ ಮಹಿಳಾ ಮೀಸಲಿಗೆ ಸೋಲುಂಟಾಗಿರುವುದಕ್ಕೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಹೆಚ್‌ಡಿಕೆ, “1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :

“ಅಂದು: ಹೆಚ್.ಡಿ.ದೇವೇಗೌಡ ಅವರ ನೇತೃತ್ವದ ಸಂಯುಕ್ತ ರಂಗ ಸರ್ಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು. ಇಂದು: ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ” ಎಂದು ಪೋಸ್ಟ್ ಮಾಡಿದ್ದಾರೆ.

“ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :

“ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿರಾಶೆ ಬೇಕಿಲ್ಲ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ” ಎಂದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

11 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

11 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

11 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago