ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ಸಂಸತ್ ಭವನದಸೆಂಟ್ರಲ್ ಹಾನ್ನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಸಂಸದರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಸಭೆ ಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ನೂತನ 52 ಮಂದಿ ಕಾಂಗ್ರೆಸ್ ಸಂಸದರು, ರಾಜ್ಯಸಭಾ ಸದಸ್ಯರು ಭಾಗಿಯಾಗಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನ ರಂದೀಪ್ ಸುರ್ಜೇವಾಲಾ, “ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟ 12.13 ಕೋಟಿ ಜನರಿಗೆ ಅವರು ಧನ್ಯವಾದ ಹೇಳಿದ್ದಾರೆ,” ಎಂದು ಟ್ವೀಟ್ ಮಾಡಿದ್ದಾರೆ.
ಸಭೆಯಲ್ಲಿ ಸಂಸತ್ ಕಲಾಪದಲ್ಲಿ ಈ ಬಾರಿ ಆಡಳಿತ ಪಕ್ಷದ ವಿರುದ್ಧ ಆರ್ಥಿಕ ಕುಂಠಿತ, ನಿರುದ್ಯೋಗ ಮತ್ತು ಇತರ ಕೆಲ ವಿಚಾರಗಳನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಬೇಕು ಎನ್ನುವ ಬಗ್ಗೆಯೂ ಚರ್ಚೆಗಳಾಗಿವೆ.
ಸಂಸತ್ ಕಲಾಪದಲ್ಲಿ ಆಡಳಿತ ಪಕ್ಷದ ವಿರುದ್ಧ ಯಾವ ವಿಚಾರಗಳನ್ನು ಎತ್ತಬೇಕು ಎನ್ನುವ ಕುರಿತೂ ಚರ್ಚೆ ನಡೆಸಲಾಗಿದೆ. ಪ್ರಮುಖವಾಗಿ ಆರ್ಥಿಕ ಕುಂಠಿತ, ನಿರುದ್ಯೋಗಮತ್ತು ಇತರಕೆಲ ವಿಚಾರಗಳನ್ನು ಹೋರಾಟಕ್ಕೆ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…