Featured

ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕಿಯಾಗಿ  ಸೋನಿಯಾ ಗಾಂಧಿ ನೇಮಕ -Vishwanews24

ಹೊಸದಿಲ್ಲಿ: ಕಾಂಗ್ರೆಸ್‌ ಪಕ್ಷದ ಸಂಸದೀಯ ಪಕ್ಷದ ನಾಯಕಿಯಾಗಿ  ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಸಂಸತ್‌ ಭವನದಸೆಂಟ್ರಲ್‌ ಹಾನ್‌ನಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ಸಂಸದರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಸಭೆ ಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ನೂತನ 52 ಮಂದಿ ಕಾಂಗ್ರೆಸ್‌ ಸಂಸದರು, ರಾಜ್ಯಸಭಾ ಸದಸ್ಯರು ಭಾಗಿಯಾಗಿದ್ದರು.

ಈ ಬಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್ ನ ರಂದೀಪ್ ಸುರ್ಜೇವಾಲಾ​, “ಸೋನಿಯಾ ಗಾಂಧಿ ಅವರು ಕಾಂಗ್ರೆಸ್​ ಸಂಸದೀಯ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್​​ ಮೇಲೆ ನಂಬಿಕೆ ಇಟ್ಟ 12.13 ಕೋಟಿ ಜನರಿಗೆ ಅವರು ಧನ್ಯವಾದ ಹೇಳಿದ್ದಾರೆ,” ಎಂದು ಟ್ವೀಟ್ ಮಾಡಿದ್ದಾರೆ.

ಸಭೆಯಲ್ಲಿ ಸಂಸತ್‌ ಕಲಾಪದಲ್ಲಿ ಈ ಬಾರಿ ಆಡಳಿತ ಪಕ್ಷದ ವಿರುದ್ಧ ಆರ್ಥಿಕ ಕುಂಠಿತ, ನಿರುದ್ಯೋಗ ಮತ್ತು ಇತರ ಕೆಲ ವಿಚಾರಗಳನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಬೇಕು ಎನ್ನುವ ಬಗ್ಗೆಯೂ ಚರ್ಚೆಗಳಾಗಿವೆ.

ಸಂಸತ್‌ ಕಲಾಪದಲ್ಲಿ ಆಡಳಿತ ಪಕ್ಷದ ವಿರುದ್ಧ ಯಾವ ವಿಚಾರಗಳನ್ನು ಎತ್ತಬೇಕು ಎನ್ನುವ ಕುರಿತೂ ಚರ್ಚೆ ನಡೆಸಲಾಗಿದೆ. ಪ್ರಮುಖವಾಗಿ ಆರ್ಥಿಕ ಕುಂಠಿತ, ನಿರುದ್ಯೋಗಮತ್ತು ಇತರಕೆಲ ವಿಚಾರಗಳನ್ನು ಹೋರಾಟಕ್ಕೆ ಅಸ್ತ್ರವನ್ನಾಗಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

20 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

20 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

20 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

21 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

21 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

21 hours ago