ಬೀದರ್ : ಅಧಿಕಾರ ಎನ್ನುವುದು ಯಾವತ್ತು ಶಾಶ್ವತವಲ್ಲ, ಅದು ನೀರ ಮೇಲಿನ ಗುಳ್ಳೆ ಇದ್ದಂತೆ. ರಾಜ್ಯದಲ್ಲಿ ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರಕ್ಕೆ ಈ ಉಪ ಚುನಾವಣೆ ಮೂಲಕ ತಕ್ಕ ಉತ್ತರ ನೀಡಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಬಸವಕಲ್ಯಾಣ ಉಪ ಚುನಾವಣೆ ಹಿನ್ನಲೆಯಲ್ಲಿ ನಗರದ ಎಂ.ಎಂ ಬೇಗ್ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಸರ್ಕಾರ ಮನೆಗೊಂದು ನಿಗಮ- ಮಂಡಳಿಗಳನ್ನು ಮಾಡಲಿ. ಕಾಂಗ್ರೆಸ್ ಪಕ್ಷಕ್ಕೆ ಮತದಾರರ ಹೃದಯ ಮತ್ತು ಪ್ರೀತಿಯೇ ಮುಖ್ಯ. ಅದರಿಂದಲೇ ಚುನಾವಣೆಯಲ್ಲಿ ಗೆಲುವು ಸಾಧಿಸಿ ತೋರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಡವರಿಗೆ ಪಡಿತರ ಅಕ್ಕಿ, ಸಾಲ ಮನ್ನಾದಂಥ ಯೋಜನೆಗಳನ್ನು ಜಾರಿಗೆ ತಂದು ಕಾಂಗ್ರೆಸ್ ಜಾತ್ಯಾತೀತ ಪಕ್ಷ ಎಂಬುದನ್ನು ಅಧಿಕಾರದಲ್ಲಿದ್ದಾಗ ತೋರಿಸಿಕೊಟ್ಟಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಮಾತ್ರ ಎಲ್ಲ ವರ್ಗಕ್ಕೆ ಮಾನ್ಯತೆ ಸಿಕ್ಕಂತಾಗುತ್ತದೆ. ಬಿಜೆಪಿಗೆ ಮತ ಹಾಕಿ ತಪ್ಪು ಮಾಡಿದೇವು ಎಂಬುದನ್ನು ನಾಡಿನ ಜನತೆಗೆ ಈಗ ಮನದಟ್ಟು ಆಗಿದೆ ಎಂದು ಹೇಳಿದರು.
ಉಪ ಚುನಾವಣೆ ವೇಳೆ ಬಿಜೆಪಿ ಸರ್ಕಾರ ತಂತ್ರ, ಹಣದ ಆಮಿಷ್ಯ ಏನೇ ಮಾಡಲಿ. ಬಸವಕಲ್ಯಾಣ ಕ್ಷೇತ್ರದಲ್ಲಿ ದಿ. ನಾರಾಯಣರಾವ್ ಅವರು ಹಣ ಹಂಚಿ ಗೆಲ್ಲಲಿ. ಪ್ರೀತಿ, ವಿಶ್ವಾಸದಿಂದ ಶಾಸಕರಾಗಿ ಜನ ನಾಯಕ ಎನಿಸಿಕೊಂಡಿದ್ದರು. ಆ ಹಾದಿಯಲ್ಲೇ ಕಾಂಗ್ರೆಸ್ ನಡೆದು ಚುನಾವಣೆಯಲ್ಲಿ ಜಯ ಗಳಿಸಲಿದೆ. ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ ಈ ಚುನಾವಣೆ ಮೂಲಕ ತಕ್ಕ ಉತ್ತರ ನೀಡಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…