ಕಾಂಗ್ರೆಸ್ ಪಕ್ಷಕ್ಕೆ ಮತದಾರರ ಹೃದಯ ಮತ್ತು ಪ್ರೀತಿಯೇ ಮುಖ್ಯ; ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿ ತೋರಿಸುತ್ತೇವೆ.. : ಡಿ.ಕೆ ಶಿವಕುಮಾರ್ -Vishwanews24

ರಾಜ್ಯದಲ್ಲಿ ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರಕ್ಕೆ ಈ ಉಪ ಚುನಾವಣೆ ಮೂಲಕ ತಕ್ಕ ಉತ್ತರ ನೀಡಬೇಕಿದೆ : ಡಿ.ಕೆ ಶಿವಕುಮಾರ್ -Vishwanews24

ಕಾಂಗ್ರೆಸ್ ಪಕ್ಷಕ್ಕೆ ಮತದಾರರ ಹೃದಯ ಮತ್ತು ಪ್ರೀತಿಯೇ ಮುಖ್ಯ..

ಚುನಾವಣೆಯಲ್ಲಿ ಗೆಲುವು ಸಾಧಿಸಿ ತೋರಿಸುತ್ತೇವೆ..

ಬೀದರ್ : ಅಧಿಕಾರ ಎನ್ನುವುದು ಯಾವತ್ತು ಶಾಶ್ವತವಲ್ಲ, ಅದು ನೀರ ಮೇಲಿನ ಗುಳ್ಳೆ ಇದ್ದಂತೆ. ರಾಜ್ಯದಲ್ಲಿ ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರಕ್ಕೆ ಈ ಉಪ ಚುನಾವಣೆ ಮೂಲಕ ತಕ್ಕ ಉತ್ತರ ನೀಡಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಬಸವಕಲ್ಯಾಣ ಉಪ ಚುನಾವಣೆ ಹಿನ್ನಲೆಯಲ್ಲಿ ನಗರದ ಎಂ.ಎಂ ಬೇಗ್ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಸರ್ಕಾರ ಮನೆಗೊಂದು ನಿಗಮ- ಮಂಡಳಿಗಳನ್ನು ಮಾಡಲಿ. ಕಾಂಗ್ರೆಸ್ ಪಕ್ಷಕ್ಕೆ ಮತದಾರರ ಹೃದಯ ಮತ್ತು ಪ್ರೀತಿಯೇ ಮುಖ್ಯ. ಅದರಿಂದಲೇ ಚುನಾವಣೆಯಲ್ಲಿ ಗೆಲುವು ಸಾಧಿಸಿ ತೋರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಡವರಿಗೆ ಪಡಿತರ ಅಕ್ಕಿ, ಸಾಲ ಮನ್ನಾದಂಥ ಯೋಜನೆಗಳನ್ನು ಜಾರಿಗೆ ತಂದು ಕಾಂಗ್ರೆಸ್ ಜಾತ್ಯಾತೀತ ಪಕ್ಷ ಎಂಬುದನ್ನು ಅಧಿಕಾರದಲ್ಲಿದ್ದಾಗ ತೋರಿಸಿಕೊಟ್ಟಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಮಾತ್ರ ಎಲ್ಲ ವರ್ಗಕ್ಕೆ ಮಾನ್ಯತೆ ಸಿಕ್ಕಂತಾಗುತ್ತದೆ. ಬಿಜೆಪಿಗೆ ಮತ ಹಾಕಿ ತಪ್ಪು ಮಾಡಿದೇವು ಎಂಬುದನ್ನು ನಾಡಿನ ಜನತೆಗೆ ಈಗ ಮನದಟ್ಟು ಆಗಿದೆ ಎಂದು ಹೇಳಿದರು.

ಉಪ ಚುನಾವಣೆ ವೇಳೆ ಬಿಜೆಪಿ ಸರ್ಕಾರ ತಂತ್ರ, ಹಣದ ಆಮಿಷ್ಯ ಏನೇ ಮಾಡಲಿ. ಬಸವಕಲ್ಯಾಣ ಕ್ಷೇತ್ರದಲ್ಲಿ ದಿ. ನಾರಾಯಣರಾವ್ ಅವರು ಹಣ ಹಂಚಿ ಗೆಲ್ಲಲಿ. ಪ್ರೀತಿ, ವಿಶ್ವಾಸದಿಂದ ಶಾಸಕರಾಗಿ ಜನ ನಾಯಕ ಎನಿಸಿಕೊಂಡಿದ್ದರು. ಆ ಹಾದಿಯಲ್ಲೇ ಕಾಂಗ್ರೆಸ್ ನಡೆದು ಚುನಾವಣೆಯಲ್ಲಿ ಜಯ ಗಳಿಸಲಿದೆ. ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ ಈ ಚುನಾವಣೆ ಮೂಲಕ ತಕ್ಕ ಉತ್ತರ ನೀಡಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago