ಮಂಗಳೂರು, : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂಬ ಕೆಲ ಮುಸ್ಲಿಂ ನಾಯಕರ ಬೇಡಿಕೆಗೆ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಬೆಂಬಲ ಸೂಚಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರು ಅತೀ ಹೆಚ್ಚು ಸಂಖ್ಯೆಯಲ್ಲಿದ್ದು, ಇವರನ್ನು ಓಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆಯೇ ಹೊರತು ಯಾವುದೇ ಸ್ಥಾನಮಾನಗಳು ದೊರಕುತ್ತಿಲ್ಲ. ಈ ನಿಟ್ಟಿನಲ್ಲಿ ಈ ಸಾರಿಯ ಲೋಕಸಭಾ ಟಿಕೆಟ್ ಮುಸ್ಲಿಮ್ ಅಭ್ಯರ್ಥಿಗೆ ನೀಡಬೇಕೆಂಬ ಕೂಗು ವ್ಯಾಪಕವಾಗಿ ಕೇಳಿ ಬರುತ್ತಿದೆ.
ಮುಸ್ಲಿಂ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ನಾಯಕರು ಸಭೆ ನಡೆಸಿ ತಮ್ಮ ಹಕ್ಕೊತ್ತಾಯ ಮಾಡಿರುವುದು ನ್ಯಾಯಯುತ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಮುಸ್ಲಿಂ ನಾಯಕರು ಸುಮ್ಮನೆ ಕುಳಿತುಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಇದಕ್ಕಾಗಿ ದೊಡ್ಡ ಹೋರಾಟ ನಡೆಸಿ. ಇಲ್ಲದಿದ್ದರೆ ನಿಮಗೆ ಟಿಕೆಟ್ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಡಬೇಕು ಎಂದು ಈ ಹಿಂದೆಯೂ ಮಾತುಗಳು ಕೇಳಿಬರುತ್ತಿತ್ತು. ಆದರೆ ಅದಕ್ಕೆ ಯಾವುದೇ ಮನ್ನಣೆ ಸಿಕ್ಕಿರಲಿಲ್ಲ. ದಶಕಗಳ ಹಿಂದಿನಿಂದಲೇ ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆಗಳು ಕೇಳಿ ಬರುತ್ತಿದ್ದು, ಈ ಕುರಿತಾದಂತೆ ಹೋರಾಟ ನಡೆಸಬೇಕು ಎಂದು ಜನಾರ್ದನ ಪೂಜಾರಿಯವರು ತಿಳಿಸಿದ್ದಾರೆ..
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…