ಮಂಗಳೂರು, : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂಬ ಕೆಲ ಮುಸ್ಲಿಂ ನಾಯಕರ ಬೇಡಿಕೆಗೆ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಬೆಂಬಲ ಸೂಚಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರು ಅತೀ ಹೆಚ್ಚು ಸಂಖ್ಯೆಯಲ್ಲಿದ್ದು, ಇವರನ್ನು ಓಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆಯೇ ಹೊರತು ಯಾವುದೇ ಸ್ಥಾನಮಾನಗಳು ದೊರಕುತ್ತಿಲ್ಲ. ಈ ನಿಟ್ಟಿನಲ್ಲಿ ಈ ಸಾರಿಯ ಲೋಕಸಭಾ ಟಿಕೆಟ್ ಮುಸ್ಲಿಮ್ ಅಭ್ಯರ್ಥಿಗೆ ನೀಡಬೇಕೆಂಬ ಕೂಗು ವ್ಯಾಪಕವಾಗಿ ಕೇಳಿ ಬರುತ್ತಿದೆ.
ಮುಸ್ಲಿಂ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ನಾಯಕರು ಸಭೆ ನಡೆಸಿ ತಮ್ಮ ಹಕ್ಕೊತ್ತಾಯ ಮಾಡಿರುವುದು ನ್ಯಾಯಯುತ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಮುಸ್ಲಿಂ ನಾಯಕರು ಸುಮ್ಮನೆ ಕುಳಿತುಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಇದಕ್ಕಾಗಿ ದೊಡ್ಡ ಹೋರಾಟ ನಡೆಸಿ. ಇಲ್ಲದಿದ್ದರೆ ನಿಮಗೆ ಟಿಕೆಟ್ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಡಬೇಕು ಎಂದು ಈ ಹಿಂದೆಯೂ ಮಾತುಗಳು ಕೇಳಿಬರುತ್ತಿತ್ತು. ಆದರೆ ಅದಕ್ಕೆ ಯಾವುದೇ ಮನ್ನಣೆ ಸಿಕ್ಕಿರಲಿಲ್ಲ. ದಶಕಗಳ ಹಿಂದಿನಿಂದಲೇ ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆಗಳು ಕೇಳಿ ಬರುತ್ತಿದ್ದು, ಈ ಕುರಿತಾದಂತೆ ಹೋರಾಟ ನಡೆಸಬೇಕು ಎಂದು ಜನಾರ್ದನ ಪೂಜಾರಿಯವರು ತಿಳಿಸಿದ್ದಾರೆ..
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…