Featured

ಕಾಂಗ್ರೆಸ್ ಪಕ್ಷದ ಈ ಹಿಂದಿನ ಆಡಳಿತವನ್ನು ಜನತೆ ಇದೀಗ ನೆನಪಿಸಿಕೊಳ್ಳುತ್ತಿದ್ದಾರೆ : ಸಿದ್ದರಾಮಯ್ಯ – Vishwanews24

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತೀಹೆಚ್ಚು ಸ್ಥಾನಗಳನ್ನು ಗಳಿಸಿ ಆಡಳಿತಕ್ಕೆ ಬರಲಿದೆ..

ಅಗ್ನಿಪಥ್ ಸೇರಿದಂತೆ ಅನೇಕ ವಿಷಯಗಳಲ್ಲಿ ಎಸ್ಸಿ ಎಸ್ಟಿ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ..

ಗಂಗಾವತಿ: ಕೇಂದ್ರ ಸರ್ಕಾರ ಎಸ್ಸಿ ಎಸ್ಟಿ ಹಿಂದುಳಿದ ವರ್ಗದ ಜನರಿಗೆ ಸಾಮಾಜಿಕ ಭದ್ರತೆ ಮತ್ತು ಉದ್ಯೋಗ ಸೇರಿದಂತೆ ಇತರ ವಿಷಯಗಳಲ್ಲಿ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ ಇದರಿಂದ ಎಸ್ಸಿ ಎಸ್ಟಿ ಹಿಂದುಳಿದ ವರು ಇನ್ನಷ್ಟು ಹಿಂದುಳಿಯಲು ಕಾರಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದರು.

ಅವರು ಗಂಗಾವತಿಯ ಮೂಲಕ ಮಸ್ಕಿಗೆ ತೆರಳುವ ಮಾರ್ಗ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಗ್ನಿಪಥ್ ಯೋಜನೆ ಮೂಲಕ ಯುವಕರಿಗೆ ಉದ್ಯೋಗ ನೀಡಿದಂತೆ ಮಾಡಿ 4 ವರ್ಷಗಳ ನಂತರ ಅವರನ್ನು ಮನೆಗೆ ಕಳಿಸುವ ಅವೈಜ್ಞಾನಿಕ ನೀತಿ ಸರಿಯಲ್ಲ .ಬಹುತೇಕ ಎಸ್ಸಿ ಎಸ್ಟಿ ಹಿಂದುಳಿದ ವರು ಹೆಚ್ಚಾಗಿ ಸೈನ್ಯವನ್ನು ಸೇರುತ್ತಾರೆ .ಅವರಿಗೆ ಸೇವಾ ಭದ್ರತೆ ಒದಗಿಸಬೇಕು. ಅಗ್ನಿಪಥ್ ಸೇರಿದಂತೆ ಅನೇಕ ವಿಷಯಗಳಲ್ಲಿ ಎಸ್ಸಿ ಎಸ್ಟಿ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ ಕೇಂದ್ರ ಸರಕಾರ ದಮನಕಾರಿ ನೀತಿಗಳನ್ನು ಯೋಜನೆಗಳನ್ನು ಕೈಬಿಟ್ಟು ಯುವಕರಿಗೆ ಉದ್ಯೋಗ ಒದಗಿಸುವ ಯೋಜನೆಗಳನ್ನು ಅನುಷ್ಠಾನ ಮಾಡಬೇಕು .ಚುನಾವಣಾ ವರ್ಷವಾಗಿರೋದ್ರಿಂದ ಇದೀಗ ತರಾತುರಿಯಲ್ಲಿ ಅಗ್ನಿಪಥ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಹುದ್ದೆಗಳ ಭರ್ತಿ ಮಾಡಲು ಪ್ರಧಾನಮಂತ್ರಿಗಳು ಸೂಚನೆ ನೀಡಿದ್ದು ಎಸ್ಸಿ ಎಸ್ಟಿ ಹಿಂದುಳಿದವರಿಗೆ ಹೆಚ್ಚಿನ ಹುದ್ದೆಗಳು ಸಿಗುವಂತೆ ಅವಕಾಶಗಳನ್ನು ಕಲ್ಪಿಸಬೇಕು ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತೀಹೆಚ್ಚು ಸ್ಥಾನಗಳನ್ನು ಕರ್ನಾಟಕದ ಗಳಿಸಿ ಆಡಳಿತಕ್ಕೆ ಬರಲಿದೆ ಬಿಜೆಪಿಯವರು ಮಾಡುವ ಎಲ್ಲಾ ಗಿಮಿಕ್ ಗಳನ್ನು ಜನರು ನಂಬುವುದಿಲ್ಲ. ಕಾಂಗ್ರೆಸ್ ಪಕ್ಷದ ಈ ಹಿಂದಿನ ಆಡಳಿತವನ್ನು ಜನತೆ ಇದೀಗ ನೆನಪಿಸಿಕೊಳ್ಳುತ್ತಿದ್ದಾರೆ ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ .ಕೇಂದ್ರ ಸರ್ಕಾರ ಇಡೀ ಸೇರಿದಂತೆ ಸ್ವಾಯತ್ತ ತನಿಖಾ ಸಂಸ್ಥೆಗಳ ಮೂಲಕ ವಿಪಕ್ಷ ಮುಖಂಡರನ್ನು ಟಾರ್ಗೆಟ್ ಮಾಡಿ ಕೇಸ್ ಗಳ ನೆಪದಲ್ಲಿ ತನಿಖೆ ನಡೆಸುತ್ತಿದೆ.ಇದರಿಂದ ಸಂವಿಧಾನದ ಆಶಯಗಳಿಗೆ ತಿಲಾಂಜಲಿ ಇಟ್ಟಂತಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಆಡಳಿತ ವಿಪಕ್ಷ ಎರಡೂ ಸಹ ದೇಶದ ಪ್ರಗತಿಗೆ ಚಿಂತನೆ ನಡೆಸಬೇಕು ತನಿಖೆ ಹೆಸರಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರನ್ನು ಟಾರ್ಗೆಟ್ ಮಾಡಿ ಸತತ ತನಿಖೆಗೆ ಒಳಪಡಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು .

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಸರ್ವೇಶ್ ಮಲ್ಲಿಕಾರ್ಜುನಾಗಪ್ಪ ಮಾಂತಗೊಂಡ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

17 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago