Featured

ಕಾಂಗ್ರೆಸ್ ಪಕ್ಷದ ಈ ಹಿಂದಿನ ಆಡಳಿತವನ್ನು ಜನತೆ ಇದೀಗ ನೆನಪಿಸಿಕೊಳ್ಳುತ್ತಿದ್ದಾರೆ : ಸಿದ್ದರಾಮಯ್ಯ – Vishwanews24

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತೀಹೆಚ್ಚು ಸ್ಥಾನಗಳನ್ನು ಗಳಿಸಿ ಆಡಳಿತಕ್ಕೆ ಬರಲಿದೆ..

ಅಗ್ನಿಪಥ್ ಸೇರಿದಂತೆ ಅನೇಕ ವಿಷಯಗಳಲ್ಲಿ ಎಸ್ಸಿ ಎಸ್ಟಿ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ..

ಗಂಗಾವತಿ: ಕೇಂದ್ರ ಸರ್ಕಾರ ಎಸ್ಸಿ ಎಸ್ಟಿ ಹಿಂದುಳಿದ ವರ್ಗದ ಜನರಿಗೆ ಸಾಮಾಜಿಕ ಭದ್ರತೆ ಮತ್ತು ಉದ್ಯೋಗ ಸೇರಿದಂತೆ ಇತರ ವಿಷಯಗಳಲ್ಲಿ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ ಇದರಿಂದ ಎಸ್ಸಿ ಎಸ್ಟಿ ಹಿಂದುಳಿದ ವರು ಇನ್ನಷ್ಟು ಹಿಂದುಳಿಯಲು ಕಾರಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದರು.

ಅವರು ಗಂಗಾವತಿಯ ಮೂಲಕ ಮಸ್ಕಿಗೆ ತೆರಳುವ ಮಾರ್ಗ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಗ್ನಿಪಥ್ ಯೋಜನೆ ಮೂಲಕ ಯುವಕರಿಗೆ ಉದ್ಯೋಗ ನೀಡಿದಂತೆ ಮಾಡಿ 4 ವರ್ಷಗಳ ನಂತರ ಅವರನ್ನು ಮನೆಗೆ ಕಳಿಸುವ ಅವೈಜ್ಞಾನಿಕ ನೀತಿ ಸರಿಯಲ್ಲ .ಬಹುತೇಕ ಎಸ್ಸಿ ಎಸ್ಟಿ ಹಿಂದುಳಿದ ವರು ಹೆಚ್ಚಾಗಿ ಸೈನ್ಯವನ್ನು ಸೇರುತ್ತಾರೆ .ಅವರಿಗೆ ಸೇವಾ ಭದ್ರತೆ ಒದಗಿಸಬೇಕು. ಅಗ್ನಿಪಥ್ ಸೇರಿದಂತೆ ಅನೇಕ ವಿಷಯಗಳಲ್ಲಿ ಎಸ್ಸಿ ಎಸ್ಟಿ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ ಕೇಂದ್ರ ಸರಕಾರ ದಮನಕಾರಿ ನೀತಿಗಳನ್ನು ಯೋಜನೆಗಳನ್ನು ಕೈಬಿಟ್ಟು ಯುವಕರಿಗೆ ಉದ್ಯೋಗ ಒದಗಿಸುವ ಯೋಜನೆಗಳನ್ನು ಅನುಷ್ಠಾನ ಮಾಡಬೇಕು .ಚುನಾವಣಾ ವರ್ಷವಾಗಿರೋದ್ರಿಂದ ಇದೀಗ ತರಾತುರಿಯಲ್ಲಿ ಅಗ್ನಿಪಥ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಹುದ್ದೆಗಳ ಭರ್ತಿ ಮಾಡಲು ಪ್ರಧಾನಮಂತ್ರಿಗಳು ಸೂಚನೆ ನೀಡಿದ್ದು ಎಸ್ಸಿ ಎಸ್ಟಿ ಹಿಂದುಳಿದವರಿಗೆ ಹೆಚ್ಚಿನ ಹುದ್ದೆಗಳು ಸಿಗುವಂತೆ ಅವಕಾಶಗಳನ್ನು ಕಲ್ಪಿಸಬೇಕು ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತೀಹೆಚ್ಚು ಸ್ಥಾನಗಳನ್ನು ಕರ್ನಾಟಕದ ಗಳಿಸಿ ಆಡಳಿತಕ್ಕೆ ಬರಲಿದೆ ಬಿಜೆಪಿಯವರು ಮಾಡುವ ಎಲ್ಲಾ ಗಿಮಿಕ್ ಗಳನ್ನು ಜನರು ನಂಬುವುದಿಲ್ಲ. ಕಾಂಗ್ರೆಸ್ ಪಕ್ಷದ ಈ ಹಿಂದಿನ ಆಡಳಿತವನ್ನು ಜನತೆ ಇದೀಗ ನೆನಪಿಸಿಕೊಳ್ಳುತ್ತಿದ್ದಾರೆ ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ .ಕೇಂದ್ರ ಸರ್ಕಾರ ಇಡೀ ಸೇರಿದಂತೆ ಸ್ವಾಯತ್ತ ತನಿಖಾ ಸಂಸ್ಥೆಗಳ ಮೂಲಕ ವಿಪಕ್ಷ ಮುಖಂಡರನ್ನು ಟಾರ್ಗೆಟ್ ಮಾಡಿ ಕೇಸ್ ಗಳ ನೆಪದಲ್ಲಿ ತನಿಖೆ ನಡೆಸುತ್ತಿದೆ.ಇದರಿಂದ ಸಂವಿಧಾನದ ಆಶಯಗಳಿಗೆ ತಿಲಾಂಜಲಿ ಇಟ್ಟಂತಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಆಡಳಿತ ವಿಪಕ್ಷ ಎರಡೂ ಸಹ ದೇಶದ ಪ್ರಗತಿಗೆ ಚಿಂತನೆ ನಡೆಸಬೇಕು ತನಿಖೆ ಹೆಸರಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರನ್ನು ಟಾರ್ಗೆಟ್ ಮಾಡಿ ಸತತ ತನಿಖೆಗೆ ಒಳಪಡಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು .

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಸರ್ವೇಶ್ ಮಲ್ಲಿಕಾರ್ಜುನಾಗಪ್ಪ ಮಾಂತಗೊಂಡ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago