Featured

ಕಾಂಗ್ರೆಸ್ ಪಕ್ಷದ ಈ ಹಿಂದಿನ ಆಡಳಿತವನ್ನು ಜನತೆ ಇದೀಗ ನೆನಪಿಸಿಕೊಳ್ಳುತ್ತಿದ್ದಾರೆ : ಸಿದ್ದರಾಮಯ್ಯ – Vishwanews24

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತೀಹೆಚ್ಚು ಸ್ಥಾನಗಳನ್ನು ಗಳಿಸಿ ಆಡಳಿತಕ್ಕೆ ಬರಲಿದೆ..

ಅಗ್ನಿಪಥ್ ಸೇರಿದಂತೆ ಅನೇಕ ವಿಷಯಗಳಲ್ಲಿ ಎಸ್ಸಿ ಎಸ್ಟಿ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ..

ಗಂಗಾವತಿ: ಕೇಂದ್ರ ಸರ್ಕಾರ ಎಸ್ಸಿ ಎಸ್ಟಿ ಹಿಂದುಳಿದ ವರ್ಗದ ಜನರಿಗೆ ಸಾಮಾಜಿಕ ಭದ್ರತೆ ಮತ್ತು ಉದ್ಯೋಗ ಸೇರಿದಂತೆ ಇತರ ವಿಷಯಗಳಲ್ಲಿ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ ಇದರಿಂದ ಎಸ್ಸಿ ಎಸ್ಟಿ ಹಿಂದುಳಿದ ವರು ಇನ್ನಷ್ಟು ಹಿಂದುಳಿಯಲು ಕಾರಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದರು.

ಅವರು ಗಂಗಾವತಿಯ ಮೂಲಕ ಮಸ್ಕಿಗೆ ತೆರಳುವ ಮಾರ್ಗ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಗ್ನಿಪಥ್ ಯೋಜನೆ ಮೂಲಕ ಯುವಕರಿಗೆ ಉದ್ಯೋಗ ನೀಡಿದಂತೆ ಮಾಡಿ 4 ವರ್ಷಗಳ ನಂತರ ಅವರನ್ನು ಮನೆಗೆ ಕಳಿಸುವ ಅವೈಜ್ಞಾನಿಕ ನೀತಿ ಸರಿಯಲ್ಲ .ಬಹುತೇಕ ಎಸ್ಸಿ ಎಸ್ಟಿ ಹಿಂದುಳಿದ ವರು ಹೆಚ್ಚಾಗಿ ಸೈನ್ಯವನ್ನು ಸೇರುತ್ತಾರೆ .ಅವರಿಗೆ ಸೇವಾ ಭದ್ರತೆ ಒದಗಿಸಬೇಕು. ಅಗ್ನಿಪಥ್ ಸೇರಿದಂತೆ ಅನೇಕ ವಿಷಯಗಳಲ್ಲಿ ಎಸ್ಸಿ ಎಸ್ಟಿ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ ಕೇಂದ್ರ ಸರಕಾರ ದಮನಕಾರಿ ನೀತಿಗಳನ್ನು ಯೋಜನೆಗಳನ್ನು ಕೈಬಿಟ್ಟು ಯುವಕರಿಗೆ ಉದ್ಯೋಗ ಒದಗಿಸುವ ಯೋಜನೆಗಳನ್ನು ಅನುಷ್ಠಾನ ಮಾಡಬೇಕು .ಚುನಾವಣಾ ವರ್ಷವಾಗಿರೋದ್ರಿಂದ ಇದೀಗ ತರಾತುರಿಯಲ್ಲಿ ಅಗ್ನಿಪಥ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಹುದ್ದೆಗಳ ಭರ್ತಿ ಮಾಡಲು ಪ್ರಧಾನಮಂತ್ರಿಗಳು ಸೂಚನೆ ನೀಡಿದ್ದು ಎಸ್ಸಿ ಎಸ್ಟಿ ಹಿಂದುಳಿದವರಿಗೆ ಹೆಚ್ಚಿನ ಹುದ್ದೆಗಳು ಸಿಗುವಂತೆ ಅವಕಾಶಗಳನ್ನು ಕಲ್ಪಿಸಬೇಕು ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತೀಹೆಚ್ಚು ಸ್ಥಾನಗಳನ್ನು ಕರ್ನಾಟಕದ ಗಳಿಸಿ ಆಡಳಿತಕ್ಕೆ ಬರಲಿದೆ ಬಿಜೆಪಿಯವರು ಮಾಡುವ ಎಲ್ಲಾ ಗಿಮಿಕ್ ಗಳನ್ನು ಜನರು ನಂಬುವುದಿಲ್ಲ. ಕಾಂಗ್ರೆಸ್ ಪಕ್ಷದ ಈ ಹಿಂದಿನ ಆಡಳಿತವನ್ನು ಜನತೆ ಇದೀಗ ನೆನಪಿಸಿಕೊಳ್ಳುತ್ತಿದ್ದಾರೆ ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ .ಕೇಂದ್ರ ಸರ್ಕಾರ ಇಡೀ ಸೇರಿದಂತೆ ಸ್ವಾಯತ್ತ ತನಿಖಾ ಸಂಸ್ಥೆಗಳ ಮೂಲಕ ವಿಪಕ್ಷ ಮುಖಂಡರನ್ನು ಟಾರ್ಗೆಟ್ ಮಾಡಿ ಕೇಸ್ ಗಳ ನೆಪದಲ್ಲಿ ತನಿಖೆ ನಡೆಸುತ್ತಿದೆ.ಇದರಿಂದ ಸಂವಿಧಾನದ ಆಶಯಗಳಿಗೆ ತಿಲಾಂಜಲಿ ಇಟ್ಟಂತಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಆಡಳಿತ ವಿಪಕ್ಷ ಎರಡೂ ಸಹ ದೇಶದ ಪ್ರಗತಿಗೆ ಚಿಂತನೆ ನಡೆಸಬೇಕು ತನಿಖೆ ಹೆಸರಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರನ್ನು ಟಾರ್ಗೆಟ್ ಮಾಡಿ ಸತತ ತನಿಖೆಗೆ ಒಳಪಡಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು .

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಸರ್ವೇಶ್ ಮಲ್ಲಿಕಾರ್ಜುನಾಗಪ್ಪ ಮಾಂತಗೊಂಡ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

3 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

3 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 days ago