Featured

ಕಾಂಗ್ರೆಸ್ ಪಕ್ಷದ ಧೀರ ಹೋರಾಟಗಾರರು ಹರಿಸಿದ ರಕ್ತ, ಬೆವರಿನ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ : ಸಿದ್ದರಾಮಯ್ಯ – Vishwanews24

ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ : ಸಿದ್ದರಾಮಯ್ಯ – Vishwanews24

ಬೆಂಗಳೂರು: ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀಮತಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಈ ನಾಡಿಗಾಗಿ, ನಾಡಿನ ಏಳಿಗೆಗಾಗಿ ತಮ್ಮ ಇಡೀ ಬದುಕು ಸವೆಸಿದವರು. ಇದು ಅಮ್ಮ-ಮಗ ತಮ್ಮ ರಕ್ತ ಬಸಿದು, ಪ್ರಾಣ ತೆತ್ತು ಕಟ್ಟಿದ ಪಕ್ಷ. ಅವರು ಪ್ರಾಣ ಕಳೆದುಕೊಂಡರು, ದೇಶ ಉಳಿಸಿದರು. ಆದರೆ ಇಂದು ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ 137 ಸಂಸ್ಥಾಪನಾ ದಿನದ ಶುಭ ಹಾರೈಕೆ ಕೋರಿ ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಹಾಗೂ ಆರೆಸೆಸ್ಸೆ ವಿರುದ್ದ ಕಿಡಿಕಾರಿದ್ದಾರೆ. “ಆಧುನಿಕ ಭಾರತದ ಇತಿಹಾಸವೆಂದರೆ ಅದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇತಿಹಾಸವೇ ಆಗಿದೆ. ಅದು ಸ್ವಾತಂತ್ರ್ಯ ಪೂರ್ವದಲ್ಲಿ ದೇಶ ಉಳಿಸಿದ ಮತ್ತು ಸ್ವಾತಂತ್ರ್ಯಾ ನಂತರ ದೇಶ ಕಟ್ಟಿದ ಇತಿಹಾಸವೂ ಹೌದು.ಸ್ವಾತ್ರಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಲಕ್ಷಾಂತರ ದೇಶಪ್ರೇಮಿ ಸದಸ್ಯರು ಗುಂಡಿಗೆ ಎದೆ ಕೊಟ್ಟರು, ಹಲವರು ಲಾಠಿಗೆ ಎದೆ ಕೊಟ್ಟರು, ಸಾವಿರಾರು ಜನ ಹುತಾತ್ಮರಾದರು, ಕಾಂಗ್ರೆಸ್ ಪಕ್ಷದ ಈ ಧೀರ ಹೋರಾಟಗಾರರು ಹರಿಸಿದ ರಕ್ತ, ಬೆವರಿನ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ”

“ಸ್ವಾತಂತ್ರ್ಯೋತ್ತರ ಭಾರತದಲ್ಲಿ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಹಾಗೂ ಪ್ರಸ್ತುತ ರಾಹುಲ್ ಗಾಂಧಿ ಅವರು ಪ್ರತಿಪಾದಿಸುತ್ತಿರುವ ವಿಚಾರಧಾರೆಗಳಿಗೆ ಅನುಗುಣವಾಗಿ ನವಭಾರತ ನಿರ್ಮಾಣಕ್ಕೆ ಮಹತ್ವದ ಕೊಡುಗೆಗಳನ್ನು ನೀಡುತ್ತಾ ಬಂದಿದೆ” ಎಂದು ತಿಳಿಸಿದ್ದಾರೆ.

“ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ, ಕೈಗೆ ಕೈ ಜೋಡಿಸಿ ನವ ಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸಲು ನಾವು ಸಂಕಲ್ಪ ಮಾಡಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಹೆಚ್‌ಡಿಕೆ, ನಿಖಿಲ್‌ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್‌ ಸೇರ್ಪಡೆ – vishwanews24

ಹೆಚ್‌ಡಿಕೆ, ನಿಖಿಲ್‌ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್‌ ಸೇರ್ಪಡೆ ಚಿಕ್ಕಮಗಳೂರು: ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ…

7 minutes ago

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

19 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

19 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

19 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

20 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

20 hours ago