ಬೆಂಗಳೂರು: ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶ್ರೀಮತಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಈ ನಾಡಿಗಾಗಿ, ನಾಡಿನ ಏಳಿಗೆಗಾಗಿ ತಮ್ಮ ಇಡೀ ಬದುಕು ಸವೆಸಿದವರು. ಇದು ಅಮ್ಮ-ಮಗ ತಮ್ಮ ರಕ್ತ ಬಸಿದು, ಪ್ರಾಣ ತೆತ್ತು ಕಟ್ಟಿದ ಪಕ್ಷ. ಅವರು ಪ್ರಾಣ ಕಳೆದುಕೊಂಡರು, ದೇಶ ಉಳಿಸಿದರು. ಆದರೆ ಇಂದು ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ 137 ಸಂಸ್ಥಾಪನಾ ದಿನದ ಶುಭ ಹಾರೈಕೆ ಕೋರಿ ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಹಾಗೂ ಆರೆಸೆಸ್ಸೆ ವಿರುದ್ದ ಕಿಡಿಕಾರಿದ್ದಾರೆ. “ಆಧುನಿಕ ಭಾರತದ ಇತಿಹಾಸವೆಂದರೆ ಅದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇತಿಹಾಸವೇ ಆಗಿದೆ. ಅದು ಸ್ವಾತಂತ್ರ್ಯ ಪೂರ್ವದಲ್ಲಿ ದೇಶ ಉಳಿಸಿದ ಮತ್ತು ಸ್ವಾತಂತ್ರ್ಯಾ ನಂತರ ದೇಶ ಕಟ್ಟಿದ ಇತಿಹಾಸವೂ ಹೌದು.ಸ್ವಾತ್ರಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಲಕ್ಷಾಂತರ ದೇಶಪ್ರೇಮಿ ಸದಸ್ಯರು ಗುಂಡಿಗೆ ಎದೆ ಕೊಟ್ಟರು, ಹಲವರು ಲಾಠಿಗೆ ಎದೆ ಕೊಟ್ಟರು, ಸಾವಿರಾರು ಜನ ಹುತಾತ್ಮರಾದರು, ಕಾಂಗ್ರೆಸ್ ಪಕ್ಷದ ಈ ಧೀರ ಹೋರಾಟಗಾರರು ಹರಿಸಿದ ರಕ್ತ, ಬೆವರಿನ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ”
“ಸ್ವಾತಂತ್ರ್ಯೋತ್ತರ ಭಾರತದಲ್ಲಿ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಹಾಗೂ ಪ್ರಸ್ತುತ ರಾಹುಲ್ ಗಾಂಧಿ ಅವರು ಪ್ರತಿಪಾದಿಸುತ್ತಿರುವ ವಿಚಾರಧಾರೆಗಳಿಗೆ ಅನುಗುಣವಾಗಿ ನವಭಾರತ ನಿರ್ಮಾಣಕ್ಕೆ ಮಹತ್ವದ ಕೊಡುಗೆಗಳನ್ನು ನೀಡುತ್ತಾ ಬಂದಿದೆ” ಎಂದು ತಿಳಿಸಿದ್ದಾರೆ.
“ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ, ಕೈಗೆ ಕೈ ಜೋಡಿಸಿ ನವ ಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸಲು ನಾವು ಸಂಕಲ್ಪ ಮಾಡಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…