Featured

ಕಾಂಗ್ರೆಸ್ ಪಕ್ಷದ ಧೀರ ಹೋರಾಟಗಾರರು ಹರಿಸಿದ ರಕ್ತ, ಬೆವರಿನ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ : ಸಿದ್ದರಾಮಯ್ಯ – Vishwanews24

ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ : ಸಿದ್ದರಾಮಯ್ಯ – Vishwanews24

ಬೆಂಗಳೂರು: ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀಮತಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಈ ನಾಡಿಗಾಗಿ, ನಾಡಿನ ಏಳಿಗೆಗಾಗಿ ತಮ್ಮ ಇಡೀ ಬದುಕು ಸವೆಸಿದವರು. ಇದು ಅಮ್ಮ-ಮಗ ತಮ್ಮ ರಕ್ತ ಬಸಿದು, ಪ್ರಾಣ ತೆತ್ತು ಕಟ್ಟಿದ ಪಕ್ಷ. ಅವರು ಪ್ರಾಣ ಕಳೆದುಕೊಂಡರು, ದೇಶ ಉಳಿಸಿದರು. ಆದರೆ ಇಂದು ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ 137 ಸಂಸ್ಥಾಪನಾ ದಿನದ ಶುಭ ಹಾರೈಕೆ ಕೋರಿ ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಹಾಗೂ ಆರೆಸೆಸ್ಸೆ ವಿರುದ್ದ ಕಿಡಿಕಾರಿದ್ದಾರೆ. “ಆಧುನಿಕ ಭಾರತದ ಇತಿಹಾಸವೆಂದರೆ ಅದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇತಿಹಾಸವೇ ಆಗಿದೆ. ಅದು ಸ್ವಾತಂತ್ರ್ಯ ಪೂರ್ವದಲ್ಲಿ ದೇಶ ಉಳಿಸಿದ ಮತ್ತು ಸ್ವಾತಂತ್ರ್ಯಾ ನಂತರ ದೇಶ ಕಟ್ಟಿದ ಇತಿಹಾಸವೂ ಹೌದು.ಸ್ವಾತ್ರಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಲಕ್ಷಾಂತರ ದೇಶಪ್ರೇಮಿ ಸದಸ್ಯರು ಗುಂಡಿಗೆ ಎದೆ ಕೊಟ್ಟರು, ಹಲವರು ಲಾಠಿಗೆ ಎದೆ ಕೊಟ್ಟರು, ಸಾವಿರಾರು ಜನ ಹುತಾತ್ಮರಾದರು, ಕಾಂಗ್ರೆಸ್ ಪಕ್ಷದ ಈ ಧೀರ ಹೋರಾಟಗಾರರು ಹರಿಸಿದ ರಕ್ತ, ಬೆವರಿನ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ”

“ಸ್ವಾತಂತ್ರ್ಯೋತ್ತರ ಭಾರತದಲ್ಲಿ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಹಾಗೂ ಪ್ರಸ್ತುತ ರಾಹುಲ್ ಗಾಂಧಿ ಅವರು ಪ್ರತಿಪಾದಿಸುತ್ತಿರುವ ವಿಚಾರಧಾರೆಗಳಿಗೆ ಅನುಗುಣವಾಗಿ ನವಭಾರತ ನಿರ್ಮಾಣಕ್ಕೆ ಮಹತ್ವದ ಕೊಡುಗೆಗಳನ್ನು ನೀಡುತ್ತಾ ಬಂದಿದೆ” ಎಂದು ತಿಳಿಸಿದ್ದಾರೆ.

“ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ, ಕೈಗೆ ಕೈ ಜೋಡಿಸಿ ನವ ಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸಲು ನಾವು ಸಂಕಲ್ಪ ಮಾಡಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago