Featured

ಕಾಂಗ್ರೆಸ್ ಪಕ್ಷದ ಧೀರ ಹೋರಾಟಗಾರರು ಹರಿಸಿದ ರಕ್ತ, ಬೆವರಿನ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ : ಸಿದ್ದರಾಮಯ್ಯ – Vishwanews24

ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ : ಸಿದ್ದರಾಮಯ್ಯ – Vishwanews24

ಬೆಂಗಳೂರು: ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀಮತಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಈ ನಾಡಿಗಾಗಿ, ನಾಡಿನ ಏಳಿಗೆಗಾಗಿ ತಮ್ಮ ಇಡೀ ಬದುಕು ಸವೆಸಿದವರು. ಇದು ಅಮ್ಮ-ಮಗ ತಮ್ಮ ರಕ್ತ ಬಸಿದು, ಪ್ರಾಣ ತೆತ್ತು ಕಟ್ಟಿದ ಪಕ್ಷ. ಅವರು ಪ್ರಾಣ ಕಳೆದುಕೊಂಡರು, ದೇಶ ಉಳಿಸಿದರು. ಆದರೆ ಇಂದು ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ಕಾಂಗ್ರೆಸ್ ಪಕ್ಷ ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ 137 ಸಂಸ್ಥಾಪನಾ ದಿನದ ಶುಭ ಹಾರೈಕೆ ಕೋರಿ ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಹಾಗೂ ಆರೆಸೆಸ್ಸೆ ವಿರುದ್ದ ಕಿಡಿಕಾರಿದ್ದಾರೆ. “ಆಧುನಿಕ ಭಾರತದ ಇತಿಹಾಸವೆಂದರೆ ಅದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಇತಿಹಾಸವೇ ಆಗಿದೆ. ಅದು ಸ್ವಾತಂತ್ರ್ಯ ಪೂರ್ವದಲ್ಲಿ ದೇಶ ಉಳಿಸಿದ ಮತ್ತು ಸ್ವಾತಂತ್ರ್ಯಾ ನಂತರ ದೇಶ ಕಟ್ಟಿದ ಇತಿಹಾಸವೂ ಹೌದು.ಸ್ವಾತ್ರಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಲಕ್ಷಾಂತರ ದೇಶಪ್ರೇಮಿ ಸದಸ್ಯರು ಗುಂಡಿಗೆ ಎದೆ ಕೊಟ್ಟರು, ಹಲವರು ಲಾಠಿಗೆ ಎದೆ ಕೊಟ್ಟರು, ಸಾವಿರಾರು ಜನ ಹುತಾತ್ಮರಾದರು, ಕಾಂಗ್ರೆಸ್ ಪಕ್ಷದ ಈ ಧೀರ ಹೋರಾಟಗಾರರು ಹರಿಸಿದ ರಕ್ತ, ಬೆವರಿನ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ”

“ಸ್ವಾತಂತ್ರ್ಯೋತ್ತರ ಭಾರತದಲ್ಲಿ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಹಾಗೂ ಪ್ರಸ್ತುತ ರಾಹುಲ್ ಗಾಂಧಿ ಅವರು ಪ್ರತಿಪಾದಿಸುತ್ತಿರುವ ವಿಚಾರಧಾರೆಗಳಿಗೆ ಅನುಗುಣವಾಗಿ ನವಭಾರತ ನಿರ್ಮಾಣಕ್ಕೆ ಮಹತ್ವದ ಕೊಡುಗೆಗಳನ್ನು ನೀಡುತ್ತಾ ಬಂದಿದೆ” ಎಂದು ತಿಳಿಸಿದ್ದಾರೆ.

“ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ, ಕೈಗೆ ಕೈ ಜೋಡಿಸಿ ನವ ಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸಲು ನಾವು ಸಂಕಲ್ಪ ಮಾಡಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

2 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

3 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

3 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 hours ago