Featured

ಕಾಂಗ್ರೆಸ್ ಪಕ್ಷದ ನಾಯಕನನ್ನು ಹೆದರಿಸಲು ಮತ್ತು ಹತ್ತಿಕ್ಕಲು ಸಾಧ್ಯವಿಲ್ಲ : ರಾಹುಲ್ ಗಾಂಧಿ – Vishwanews24

ಇಡಿ ವಿಚಾರಣೆ ನನ್ನ ಮೇಲೆ ಪರಿಣಾಮ ಬೀರುವುದಿಲ್ಲ ..

ಕಾಂಗ್ರೆಸ್ ಅನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಇಡಿ ಅಧಿಕಾರಿಗಳಿಗೆ ಗೊತ್ತಿದೆ..

ಬೆಂಬಲ ನೀಡಿದ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ರಾಹುಲ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವರ ಪಾತ್ರದ ಕುರಿತು ಇತ್ತೀಚೆಗೆ ಐದು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯವು ತನ್ನ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಬುಧವಾರ ಹೇಳಿದ್ದಾರೆ.

ಇಡಿ (ED) ಮತ್ತು ಅಂತಹ ಸಂಸ್ಥೆಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ, ನನ್ನನ್ನು ವಿಚಾರಣೆ ನಡೆಸಿದ ಅಧಿಕಾರಿಗಳು ಸಹ ಕಾಂಗ್ರೆಸ್ ಪಕ್ಷದ ನಾಯಕನನ್ನು ಹೆದರಿಸಲು ಮತ್ತು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅರ್ಥಮಾಡಿಕೊಂಡರು ಎಂದು ಬುಧವಾರ ಮಧ್ಯಾಹ್ನ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ರಾಹುಲ್ ಹೇಳಿದ್ದಾರೆ.

ಇಡಿ ವಿಚಾರಣೆ ವೇಳೆ ಬೆಂಬಲ ನೀಡಿದ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ರಾಹುಲ್, ನಾನು ಒಬ್ಬಂಟಿ ಅಲ್ಲ, ನಾವೆಲ್ಲರೂ ಪ್ರಜಾಪ್ರಭುತ್ವಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಟೀಕಿಸಿ ಕಾಂಗ್ರೆಸ್ ನಾಯಕ ನಾವು ಸೇನಾಪಡೆಗಳನ್ನು ಬಲಪಡಿಸಬೇಕಿದೆ ಆದರೆ ಸರ್ಕಾರ ಅದನ್ನು ದುರ್ಬಲವನ್ನಾಗಿ ಮಾಡುತ್ತಿದೆ.ಯುದ್ಧದ ವೇಳೆ ಇದರ ಪರಿಣಾಮ ಗೊತ್ತಾಗುತ್ತದೆ ಎಂದು ಅವರು ಹೇಳಿದ್ದಾರೆ.

 

Vishwa News 24

Recent Posts

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

6 minutes ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

23 minutes ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

31 minutes ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

45 minutes ago

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

15 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

1 day ago