ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನಿಂದ ಕಂಗೆಟ್ಟಿರುವಾಗಲೇ ಪಕ್ಷದ ಹಿರಿಯ ನಾಯಕರು ತಿರುಗಿ ಬಿದ್ದಿದ್ದಾರೆ.
ಪಕ್ಷದ ನಾಯಕರಾದ ರಾಮಲಿಂಗಾರೆಡ್ಡಿ ಅಸಮಾಧಾನ ಹೊರ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಸ್ಥಿತಿಗೆ ಹೊಸಬರು, ವಲಸಿಗರು ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯ ಮತ್ತು ಟೀಂನ್ನೇ ಟಾರ್ಗೆಟ್ ಮಾಡಿ ಟ್ವೀಟ್ ಮಾಡಿರುವ ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಪಕ್ಷದ ಬಗ್ಗೆ ಅರಿವಿಲ್ಲದ ಹೊಸಬರು, ವಲಸಿಗರಿಗೆ ಮಣೆ ಹಾಕಿದ್ದೇ ಕಾರಣವಾಗಿದೆ. ಪಕ್ಷದ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಲು ಮುಂಚೂಣಿ ನಾಯಕರೇ ಕಾರಣರಾಗಿದ್ದಾರೆ. ಅಲ್ಲದೆ ಹಿರಿಯರ ಕಡೆಗಣನೆ, ಕಾಂಗ್ರೆಸ್ ಸಚಿವರ ಸಂಘಟನಾ ಕೊರೆತೆ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ಸಚಿವರು, ಕಾರ್ಯಕರ್ತರ ನಡುವೆ ಸಮನ್ವಯತೆಯೇ ಇಲ್ಲವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನೆ, ದೂರದೃಷ್ಟಿತ್ವ ಕೊರತೆಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು.
ಹಿರಿಯರ ಸಲಹೆ ಪರಿಗಣಿಸದಿರುವುದು, ಕೆಲವು ಸಚಿವರ ಕಾರ್ಯಕ್ಷಮತೆ ಕೂಡ ಪಕ್ಷಕ್ಕೆ ಹಿನ್ನಡೆಯಾಗಲು ಮುಖ್ಯ ಕಾರಣವೆಂದು ಹೇಳಿದ್ದಾರೆ. ಪಕ್ಷದ ಹಿತಕ್ಕಾಗಿ ಹಿರಿಯರು ಸಮಾಲೋಚನೆ ನಡೆಸಬೇಕಿದೆ. ಯಾರೂ ಪಕ್ಷ ಬಿಡದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…