ನವದೆಹಲಿ: ಕಾಂಗ್ರೆಸ್ ಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದ್ದು, ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಲೆಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್, ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿ ಅವರೇ ಸೂಕ್ತ ವ್ಯಕ್ತಿ ಎಂದು ಅವರು ತಿಳಿಸಿದ್ದಾರೆ.ಸೋನಿಯಾ ಗಾಂಧಿ ಹಾಗೂ 23 ಪ್ರಮುಖ ಮುಖಂಡರ ನಡುವೆ ಇಂದು (ಶನಿವಾರ) ನಡೆಯಲಿರುವ ಸಭೆಗೂ ಮುಂಚಿತವಾಗಿ ಇಂತಹದೊಂದು ಅಭಿಪ್ರಾಯ ವ್ಯಕ್ತವಾಗಿದೆ.
ಅವರೆಲ್ಲರು ಸಕ್ರಿಯ ನಾಯಕತ್ವವನ್ನು ಕೋರಿದ್ದು, ಗಾಂಧಿ ಯಾವಾಗಲೂ ಮಾರ್ಗದರ್ಶಕ ಶಕ್ತಿಯಾಗಿರುತ್ತಾರೆ ಎಂದು ಅಭಿಪ್ರಾಯಪಟ್ಟಿದೆ.
ಸೋನಿಯಾ ಗಾಂಧಿ ಭೇಟಿ ಮಾಡುವ ಕಾಂಗ್ರೆಸ್ ನಿಯೋಗದಲ್ಲಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮೇಲ್ಮನೆ ಪಕ್ಷದ ಉಪನಾಯಕ ಆನಂದ್ ಶರ್ಮಾ, ಮಾಜಿ ಸಚಿವ ಪಿ ಚಿದಂಬರಂ, ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್, ಭೂಪಿಂದರ್ ಹೂಡಾ, ಪೃಥ್ವಿರಾಜ್ ಚವಾಣ್ ಮತ್ತು ಶಶಿ ತರೂರ್ ಇರಲಿದ್ದಾರೆ.
ಕಾಂಗ್ರೆಸ್ ಪಕ್ಷದ 99.9% ಸದಸ್ಯರು ರಾಹುಲ್ ಗಾಂಧಿಯನ್ನು ಅಧ್ಯಕ್ಷರಾಗಿ ನೋಡಲು ಬಯಸುತ್ತಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಶುಕ್ರವಾರ ಹೇಳಿದ್ದಾರೆ. ಮುಂದಿನ ವರ್ಷ ಪಶ್ಚಿಮ ಬಂಗಾಳ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಿಹಾರ ಸೋಲಿನ ಪಾಠ ಕಲಿತ ಮೇಲೆ ಪಕ್ಷವು ತನ್ನ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುತ್ತಿದೆ. ಇತ್ತೀಚೆಗೆ ಕೆಲವು ಕಾಂಗ್ರೆಸ್ ನಾಯಕರು ಹೊಸ ಅಧ್ಯಕ್ಷರ ಆಯ್ಕೆಯ ಬಗ್ಗೆ ಮಾತನಾಡಿದ್ದರು, ಆದರೆ ಸೋನಿಯಾ ಗಾಂಧಿ ಬಂಡಾಯವೆದ್ದ ನಾಯಕರುಗಳ ಜ 23 ಸಭೆ ನಡೆಸಲು ಕರೆದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…