ಬೆಂಗಳೂರು : ಕಾಂಗ್ರೆಸ್ ಪಕ್ಷವೇ ನನ್ನ ಪಾಲಿನ ದೇವರು, ಹೇಳಿದಂತೆ ಕೇಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾವುಕರಾಗಿದ್ದಾರೆ.
ಅವರು ಇಂದು ದೆಹಲಿಗೆ ತೆರಳುವ ವೇಳೆ ಬೆಂಗಳೂರು ಸುದ್ದಿಗಾರರ ಜೊತೆ ಮಾತನಾಡಿದರು.ಕಾಂಗ್ರೆಸ್ ಪಕ್ಷ, ನನ್ನ ಪಾಲಿನ ದೇವರು.ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ.ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ.ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ.ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ.ನಾನು ಒಬ್ಬನೇ ಹೋಗುತ್ತಿದ್ದೇನೆ.ಒಬ್ಬನೇ ಬರುವಂತೆ ಪ್ರಧಾನ ಕಾರ್ಯದರ್ಶಿಯವರು ನನಗೆ ಸೂಚನೆ ಕೊಟ್ಟಿದ್ದಾರೆ.ಹೀಗಾಗಿ ಒಬ್ಬನೇ ಹೋಗುತ್ತಿದ್ದೇನೆ.ನನ್ನ ಆರೋಗ್ಯ ಸುಧಾರಿಸಿದ್ದು, ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ.ಜನ ನಮಗೆ ನೀಡಿರುವ ಆಶೀರ್ವಾದ, ನಮ್ಮ ಮೇಲೆ ಇಟ್ಟಿರುವ ನಂಬಿಕೆ, ಉಳಿಸಿ ಬೆಳೆಸಿಕೊಂಡು ಹೋಗಲು ನಾವು ಶ್ರಮಿಸಬೇಕಿದೆ ಎಂದರು.
ನಾವು ಕಾನೂನು ಬದ್ಧವಾಗಿ ದೇಶದ ಸಂವಿಧಾನ ಉಳಿಸಲು, ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಿಸಲು ರಾಜ್ಯದ ಜನತೆ ಹಾಗೂ ತಾಯಿ ಚಾಮುಂಡೇಶ್ವರಿ ಅವರ ಆಶೀರ್ವಾದ ಇರಲಿ.ಹೈಕಮಾಂಡ್ ಬಳಿ ಸಿಎಂ ಸ್ಥಾನ ಕೇಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಪಕ್ಷದ ರಾಷ್ಟ್ರೀಯ ನಾಯಕರು ನನ್ನನ್ನು ಏಕಾಂಗಿಯಾಗಿ ಬರಲು ತಿಳಿಸಿದ್ದು, ಹೀಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ’ ಎಂದಷ್ಟೇ ತಿಳಿಸಿದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…