ಬೆಂಗಳೂರು : ಕಾಂಗ್ರೆಸ್ ಪಕ್ಷವೇ ನನ್ನ ಪಾಲಿನ ದೇವರು, ಹೇಳಿದಂತೆ ಕೇಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾವುಕರಾಗಿದ್ದಾರೆ.
ಅವರು ಇಂದು ದೆಹಲಿಗೆ ತೆರಳುವ ವೇಳೆ ಬೆಂಗಳೂರು ಸುದ್ದಿಗಾರರ ಜೊತೆ ಮಾತನಾಡಿದರು.ಕಾಂಗ್ರೆಸ್ ಪಕ್ಷ, ನನ್ನ ಪಾಲಿನ ದೇವರು.ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ.ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ.ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ.ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ.ನಾನು ಒಬ್ಬನೇ ಹೋಗುತ್ತಿದ್ದೇನೆ.ಒಬ್ಬನೇ ಬರುವಂತೆ ಪ್ರಧಾನ ಕಾರ್ಯದರ್ಶಿಯವರು ನನಗೆ ಸೂಚನೆ ಕೊಟ್ಟಿದ್ದಾರೆ.ಹೀಗಾಗಿ ಒಬ್ಬನೇ ಹೋಗುತ್ತಿದ್ದೇನೆ.ನನ್ನ ಆರೋಗ್ಯ ಸುಧಾರಿಸಿದ್ದು, ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ.ಜನ ನಮಗೆ ನೀಡಿರುವ ಆಶೀರ್ವಾದ, ನಮ್ಮ ಮೇಲೆ ಇಟ್ಟಿರುವ ನಂಬಿಕೆ, ಉಳಿಸಿ ಬೆಳೆಸಿಕೊಂಡು ಹೋಗಲು ನಾವು ಶ್ರಮಿಸಬೇಕಿದೆ ಎಂದರು.
ನಾವು ಕಾನೂನು ಬದ್ಧವಾಗಿ ದೇಶದ ಸಂವಿಧಾನ ಉಳಿಸಲು, ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಿಸಲು ರಾಜ್ಯದ ಜನತೆ ಹಾಗೂ ತಾಯಿ ಚಾಮುಂಡೇಶ್ವರಿ ಅವರ ಆಶೀರ್ವಾದ ಇರಲಿ.ಹೈಕಮಾಂಡ್ ಬಳಿ ಸಿಎಂ ಸ್ಥಾನ ಕೇಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಪಕ್ಷದ ರಾಷ್ಟ್ರೀಯ ನಾಯಕರು ನನ್ನನ್ನು ಏಕಾಂಗಿಯಾಗಿ ಬರಲು ತಿಳಿಸಿದ್ದು, ಹೀಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ’ ಎಂದಷ್ಟೇ ತಿಳಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…