ಬೆಂಗಳೂರು: ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದಿಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಕೆಪಿಸಿಸಿ ಅಧ್ಯಕ್ಷ ನಾನು, ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಎಂದು ಹೇಳಿದರು.
ನಮ್ಮ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ನವರು ರಾಜಕೀಯವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವುದು ವಿರೋಧ ಪಕ್ಷಗಳಿಂದ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ ಇಲ್ಲಿ ನಮ್ಮ ಸರ್ಕಾರ ಇರುವುದು ಅವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…