ಬಾಗಲಕೋಟೆ: ನಮ್ಮ ಕಾಂಗ್ರೆಸ್ ಪಕ್ಷ ಮುಂಬರುವಂತ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು,ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ, 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತೇವೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಬಂದಾಗ ನಮಗೆ ಆಹಾರ ಸ್ವಾಲಂಬನೆ ಇರಲಿಲ್ಲ. ಆಹಾರ ಸ್ವಾಲಂಬನೆ ಮಾಡಿದ್ದು ಇಂದಿರಾ ಗಾಂದಿಯವರ ನೇತೃತ್ವದ ಸರ್ಕಾರ ಎಂದು ಹೇಳಿದರು.
ನಾನು ಸಿಎಂ ಆದಮೇಲೆ ಉಚಿತವಾಗಿ ತಲಾ 7 ಕೆಜಿ ಅಕ್ಕಿ ಕೊಟ್ಟೆ. ಹಸಿವು ಮುಕ್ತ ರಾಜ್ಯವಾಗಲೇ ಬೇಕು ಎಂಬ ಹಿನ್ನಲೆಯಲ್ಲಿ 7 ಕೆಜಿ ಅಕ್ಕಿ ನೀಡಲಾಯಿತು. ಆದ್ರೇ ಅದನ್ನೇ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತೆ. ಪುಕ್ಕಟ್ಟೆ ಪ್ರಚಾರವನ್ನು ಪಡೆದರು ಅಂದರು ಅಂತ ಹೇಳಿದರು.
ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿದ್ದರೇ ಗುಜರಾತ್ ಸೇರಿದಂತೆ ಬಿಜೆಪಿ ಆಡಳಿತವಿರುವಂತ ರಾಜ್ಯಗಳಲ್ಲಿ ಉಚಿತವಾಗಿ ಏಕೆ ಕೊಡುತ್ತಿಲ್ಲ? ಹಸಿವು ಮುಕ್ತ ರಾಜ್ಯವನ್ನಾಗಿ ಏಕೆ ಮಾಡಲಿಲ್ಲ ಎಂಬುದಾಗಿ ಪ್ರಶ್ನಿಸಿದರು.
ಬಡವರು, ರೈತರು, ಕಾರ್ಮಿಕರಿಗಾಗಿ ಇಂದಿರಾ ಕ್ಯಾಂಟೀನ್ ತೆರೆಯಲಾಯಿತು. ಆದ್ರೇ ಬೊಮ್ಮಾಯಿ ಅವರೇಕೆ ಇಂದಿರಾ ಕ್ಯಾಂಟೀನ್ ಬಂದ್ ಮಾಡಿದ್ರು ಎಂದು ಪ್ರಶ್ನಿಸಿದರು.
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ, 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತೇವೆ ಎಂಬುದಾಗಿ ಇದೇ ಸಂದರ್ಭದಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ಘೋಷಣೆ ಮಾಡಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…