ಬಾಗಲಕೋಟೆ: ನಮ್ಮ ಕಾಂಗ್ರೆಸ್ ಪಕ್ಷ ಮುಂಬರುವಂತ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು,ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ, 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತೇವೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಬಂದಾಗ ನಮಗೆ ಆಹಾರ ಸ್ವಾಲಂಬನೆ ಇರಲಿಲ್ಲ. ಆಹಾರ ಸ್ವಾಲಂಬನೆ ಮಾಡಿದ್ದು ಇಂದಿರಾ ಗಾಂದಿಯವರ ನೇತೃತ್ವದ ಸರ್ಕಾರ ಎಂದು ಹೇಳಿದರು.
ನಾನು ಸಿಎಂ ಆದಮೇಲೆ ಉಚಿತವಾಗಿ ತಲಾ 7 ಕೆಜಿ ಅಕ್ಕಿ ಕೊಟ್ಟೆ. ಹಸಿವು ಮುಕ್ತ ರಾಜ್ಯವಾಗಲೇ ಬೇಕು ಎಂಬ ಹಿನ್ನಲೆಯಲ್ಲಿ 7 ಕೆಜಿ ಅಕ್ಕಿ ನೀಡಲಾಯಿತು. ಆದ್ರೇ ಅದನ್ನೇ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತೆ. ಪುಕ್ಕಟ್ಟೆ ಪ್ರಚಾರವನ್ನು ಪಡೆದರು ಅಂದರು ಅಂತ ಹೇಳಿದರು.
ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿದ್ದರೇ ಗುಜರಾತ್ ಸೇರಿದಂತೆ ಬಿಜೆಪಿ ಆಡಳಿತವಿರುವಂತ ರಾಜ್ಯಗಳಲ್ಲಿ ಉಚಿತವಾಗಿ ಏಕೆ ಕೊಡುತ್ತಿಲ್ಲ? ಹಸಿವು ಮುಕ್ತ ರಾಜ್ಯವನ್ನಾಗಿ ಏಕೆ ಮಾಡಲಿಲ್ಲ ಎಂಬುದಾಗಿ ಪ್ರಶ್ನಿಸಿದರು.
ಬಡವರು, ರೈತರು, ಕಾರ್ಮಿಕರಿಗಾಗಿ ಇಂದಿರಾ ಕ್ಯಾಂಟೀನ್ ತೆರೆಯಲಾಯಿತು. ಆದ್ರೇ ಬೊಮ್ಮಾಯಿ ಅವರೇಕೆ ಇಂದಿರಾ ಕ್ಯಾಂಟೀನ್ ಬಂದ್ ಮಾಡಿದ್ರು ಎಂದು ಪ್ರಶ್ನಿಸಿದರು.
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ 7 ಕೆಜಿ ಅಲ್ಲ, 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತೇವೆ ಎಂಬುದಾಗಿ ಇದೇ ಸಂದರ್ಭದಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ಘೋಷಣೆ ಮಾಡಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…