ಕೊಡಗು : ಲೋಕಸಮರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋಲಲು ಹೆಚ್.ಡಿ. ದೇವೇಗೌಡ ಹಾಗೂ ಸಿದ್ದರಾಮಯ್ಯ ನೇರ ಕಾರಣ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಎ. ಮಂಜು ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಸ್ಥಾನಮಾನಗಳು ಸಿಗುತ್ತಿಲ್ಲ. ಅಪವಿತ್ರ ಮೈತ್ರಿ ಸರ್ಕಾರಕ್ಕೆ ಜನ ಛೀಮಾರಿ ಹಾಕಿ ಬಿಜೆಪಿಯನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದರೂ ರಾಜೀನಾಮೆ ನೀಡಿ ಮನೆಗೆ ಹೋಗೋದು ಬಿಟ್ಟು ಅಧಿಕಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ನಿಷ್ಠಾವಂತರಿಗಿಂತ ತಲೆಬಾಗುವವರಿಎ ಮಾತ್ರ ಹೆಚ್ಚಿನ ಲಾಭವಿದೆ ಎಂದರು.
ದೇವೇಗೌಡ ಮತ್ತು ಮಕ್ಕಳ ಪಕ್ಷದಲ್ಲಿ ಅಧಿಕಾರವೆಲ್ಲಾ ಅವರ ಕುಟುಂಬದವರಿಗೆ ಆಗಬೇಕು. ಬೇರೆಯವರಿಗೆ ಅಲ್ಲಿ ಅವಕಾಶವೇ ಇಲ್ಲ.
ಹಿರಿಯ ರಾಜಕಾರಣಿ ಹೆಚ್.ವಿಶ್ವನಾಥ್ ಅವರನ್ನು ಜೆಡಿಎಸ್ ನವರು ಚೆನ್ನಾಗಿ ಬಳಸಿಕೊಂಡರು. ಇದೀಗ ಪಕ್ಷದೊಳಗೆ ಅಪ್ಪ ಮಕ್ಕಳ ಜೊತೆ ಬೇರೆ ಯಾರೂ ಇರಲು ಸಾಧ್ಯವೇ ಇಲ್ಲ. ಇದರಿಂದ ಬೇಸರವಾಗಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…