ವಿಜಯಪುರ: ಬಿಜೆಪಿ ಸೇಡಿನ ರಾಜಕಾರಣಕ್ಕಾಗಿ ಐಟಿ, ಇಡಿ ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದಲ್ಲಿ ಸೇಡಿನ ರಾಜಕೀಯ ನಡೆಯುತ್ತಿದೆ. ಚಿದಂಬರಂ ಆಯ್ತು, ಈಗ ಡಿಕೆಶಿ ಬಂಧನವಾಗಿದೆ. ತಪ್ಪು ಮಾಡಿದವರ ವಿರುದ್ಧ ವಿಚಾರಣೆ ಮಾಡಲಿ ಎಂದು ಕಿಡಿಕಾರಿದರು.
ಈ ಹಿಂದೆ ಜನಾರ್ಧನ ರೆಡ್ಡಿಬಂಧನವಾಗಿದ್ದು ಗಣಿಗೆ ಸಂಬಂಧಿಸಿದ ವಿಚಾರದಲ್ಲಿ. ಈಗ ಡಿ. ಕೆ. ಶಿವಕುಮಾರ್ ಬಂಧನವಾಗಿದ್ದು ರಾಜಕೀಯ ಸೇಡಿನ ಹಿನ್ನೆಲೆಯಲ್ಲಿ ಎಂದು ಗೃಹ ಇಲಾಖೆ ಮಾಜಿ ಸಚಿವ ಎಂ. ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ನಾವು ಡಿ. ಕೆ. ಶಿವಕುಮಾರ್ ಜೊತೆಗಿದ್ದೇವೆ. ಇದನ್ನು ಎದುರಿಸಿ ಡಿ. ಕೆ. ಶಿವಕುಮಾರ್ ಹೊರಗೆ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಇಂದು ಸ್ವಾಭಾವಿಕವಾಗಿ ಪ್ರತಿಭಟನೆ ನಡೆಯುತ್ತಿದೆ. ಕೆಲ ಕಿಡಿಗೇಡಿಗಳೂ ಇಂಥ ವೇಳೆ ಭಾಗಿಯಾಗಿರುತ್ತಾರೆ ಎಂದು ಹೇಳಿದರು.
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ…
ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…
ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…
ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್ಆರ್ಟಿಸಿ…
ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…
ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…