ಕಾಂಗ್ರೆಸ್‌ ಪರ ಮತ ಚಾಲಾಯಿಸಿದ ಶ್ರೀನಿವಾಸ್ ಗೌಡ ; ಮಾನ ಮರ್ಯಾದೆ ಇದ್ದರೇ ಪಕ್ಷ ಬಿಟ್ಟು ಹೋಗು :  HDK ಕಿಡಿ – Vishwnaews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್‌ ಪರ ಮತ ಚಾಲಾಯಿಸಿದ ಶ್ರೀನಿವಾಸ್ ಗೌಡ ; ಮಾನ ಮರ್ಯಾದೆ ಇದ್ದರೇ ಪಕ್ಷ ಬಿಟ್ಟು ಹೋಗು :  HDK ಕಿಡಿ

ಬೆಂಗಳೂರು : ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಮತ ಚಲಾಯಿಸಿದ್ದಾರೆ. ಇದನ್ನು ಬಹಿರಂಗವಾಗಿಯೇ ಹೇಳಿಕೊಂಡ ಅವರು ಕಾಂಗ್ರೆಸ್ ಪಕ್ಷದ ಮೇಲಿನ ಪ್ರೀತಿಯಿಂದಾಗಿ ತಾನು ಮತ ಚಲಾಯಿಸಿರುವುದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ‘ಕ್ರಾಸ್ ವೋಟ್’ ಮಾಡಿದ ಶ್ರೀನಿವಾಸ್ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಿನ್ನೆಯಿಂದ ಗೆದ್ದಿರುವ ಶ್ರೀನಿವಾಸ್ ಗೌಡ ಅವರಿಗೆ ನಾಚಿಕೆ, ಮಾನ – ಮರ್ಯಾದೆ ಇದ್ದರೆ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಯಾವ ಮುಖ ಹೊತ್ತುಕೊಂಡು ಶ್ರೀನಿವಾಸ್ ಗೌಡ ತಮ್ಮ ಕ್ಷೇತ್ರದ ಜನತೆಗೆ ಮುಖ ತೋರಿಸುತ್ತಾರೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿದ್ದಾರೆ. ಯಾವ ನೈತಿಕತೆ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಜೆಡಿಎಸ್ ಶಾಸಕರನ್ನು ಸೆಳೆಯಲು ಮುಂದಾಗಿದ್ದಾರೆ ಎಂದು ಕೇಳಿದರು.

ಬೆಂಗಳೂರಿನಲ್ಲಿ ಮತ್ತೆ ಮಹಿಳೆ ಮೇಲೆ ಆ್ಯಸಿಡ್ ದಾಳಿ – Vishwanews24

Leave a Reply