Featured

ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕಾಪಾಡದೆ ಇದ್ದಿದ್ದರೆ ದೇಶದಲ್ಲಿ ಮೋದಿಯವರು ಪ್ರಧಾನಿಯಾಗಲು ಸಾಧ್ಯವಾಗುತ್ತಿರಲಿಲ್ಲ : ದಿನೇಶ್‍ಗುಂಡೂರಾವ್ -Vishwanews24

ಬೆಂಗಳೂರು,:ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕಾಪಾಡದೆ ಇದ್ದಿದ್ದರೆ ಈ ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು.

ನಗರದ ಗಾಂಧಿಭವನದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ 150ನೇ ಜನ್ಮದಿನಾಚರಣೆ ನೆನಪಿನೊಂದಿಗೆ ಅವರ ಆದರ್ಶ ಪಾಲಿಸುವ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರನ್ನು ಸನ್ಮಾನಿಸುವ ಪ್ರೇರಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಲ್ಲದೆ, ಹಿಂದೂ ಮಹಾಸಭಾವೇ ಸ್ವಾತಂತ್ರ್ಯನಂತರ ಅಧಿಕಾರಕ್ಕೆ ಬಂದಿದ್ದರೆ ಪ್ರಜಾಪ್ರಭುತ್ವ ಉಳಿಯುತ್ತಿರಲಿಲ್ಲ. ಸರ್ವಾಧಿಕಾರಿ ಧೋರಣೆಯನ್ನು ಪಾಲಿಸುವ ಆರ್‍ಎಸ್‍ಎಸ್ ಮತ್ತು ಹಿಂದೂ ಮಹಾಸಭಾದ ನಾಯಕರು ದೇಶವನ್ನು ಬೇರೆಯ ಹಾದಿಗೆ ಕೊಂಡೊಯ್ಯುತ್ತಿದ್ದರು.ಅಖಂಡತೆ, ಸೌಹಾರ್ದತೆ ನಾಶವಾಗುತ್ತಿತ್ತು.ಮೋದಿಯಂಥವರು ಪ್ರಧಾನಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಈಗಿನ ಯುವಜನರಲ್ಲಿ ಮಹಾತ್ಮಗಾಂಧೀಜಿ ಮತ್ತು ಜವಾಹರ್‍ಲಾಲ್ ನೆಹರೂ ಬಗ್ಗೆ ನಕಾರಾತ್ಮಕ ಅಭಿಪ್ರಾಯಗಳಿವೆ. ಅವರಿಬ್ಬರೂ ಇಲ್ಲದೆ ಇದ್ದರೆ ಶ್ರೀಲಂಕಾ, ಪಾಕಿಸ್ತಾನ ಭಾರತದಲ್ಲೇ ಇರುತ್ತಿದ್ದವು.ವಿಶಾಲ ಭಾರತ ನಮ್ಮದಾಗಿರುತ್ತಿತ್ತು ಎಂದು ಹಗುರವಾಗಿ ಮಾತನಾಡುತ್ತಾರೆ.ನಾನಾ ದೇಶಗಳನ್ನು ಒಗ್ಗೂಡಿಸಿ ಆ ಸಂದರ್ಭದಲ್ಲಿ ಭಾರತ ರಚನೆಯಾಗಿದೆ.ಈಗ ಮಾತನಾಡುವುದು ಸುಲಭ. ಕಟ್ಟುವ ಹಂತದಲ್ಲಿ ಎಲ್ಲವೂ ಕಷ್ಟ.. ಆದರೂ ಕಾಂಗ್ರೆಸ್ ವಿರುದ್ಧವೇ ಮಾತನಾಡುತ್ತಾರೆ ಎಂದು ಟೀಕಿಸಿದರು.

ಗಾಂಧೀಜಿಯವರ ಹೋರಾಟದ ನೈತಿಕ ಶಕ್ತಿ ನಮಗೆ ಪ್ರೇರಣೆಯಾಗಬೇಕು.ಇತ್ತೀಚಿನ ದಿನಗಳಲ್ಲಿ ಸಾವರ್ಕರ್‍ಗೆ ಭಾರತರತ್ನ ನೀಡುವ ಚರ್ಚೆಯಾಗುತ್ತಿದೆ. ಗಾಂಧಿ ಕೊಂದ ಗೋಡ್ಸೆಗೂ ಭಾರತರತ್ನ ಕೊಡಬಹುದು ಎಂಬ ಅರ್ಥದಲ್ಲಿ ಸಚಿವರೊಬ್ಬರು ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago