Featured

ಕಾಂಗ್ರೆಸ್ ಮಹಾ ಅಲೆ ಪ್ರಾರಂಭ :  ಪ್ರಜಾಧ್ವನಿ ಯಾತ್ರೆಯಲ್ಲಿ ಡಿ.ಕೆ. ಶಿವಕುಮಾರ್ – Vishwanews24

ಕಾಂಗ್ರೆಸ್ ಮಹಾ ಅಲೆ ಪ್ರಾರಂಭ :  ಪ್ರಜಾಧ್ವನಿ ಯಾತ್ರೆಯಲ್ಲಿ ಡಿ.ಕೆ. ಶಿವಕುಮಾರ್

ಜನರ ಧ್ವನಿ, ಭಾವನೆ ಸಮಸ್ಯೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ನಿಮಗೆ ಶಕ್ತಿ ಕೊಡೋದೇ ಪ್ರಜಾಧ್ವನಿ ಯಾತ್ರೆಯ ಉದ್ದೇಶ

ಹಾವೇರಿ: ಜನರ ಧ್ವನಿ, ಭಾವನೆ , ಜನರ ಸಮಸ್ಯೆ, ನೋವು ಎಲ್ಲದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ನಿಮಗೆ ಶಕ್ತಿ ಕೊಡೋದೇ ಪ್ರಜಾಧ್ವನಿ  ಯಾತ್ರೆಯ ಉದ್ದೇಶ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಗುರುವಾರ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈಗ ಎಲ್ಲಾ ಕಡೆ ಮಧ್ಯಾಹ್ನದ ಕಾರ್ಯಕ್ರಮದಲ್ಲಿ ಹಾವೇರಿ ಕಾರ್ಯಕ್ರಮ ಬಹಳ ಉತ್ತಮವಾಗಿ ನಡೆಯಿತು.

ಪ್ರತಿ ದಿನ ಜನರ ಸಾಗರವಾಗಿ ಕಾಂಗ್ರೆಸ್ ಮಹಾ ಅಲೆ ಪ್ರಾರಂಭವಾಗಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಕಳೆದುಕೊಂಡರು. ರೈತರ ಆದಾಯ ಡಬಲ್ ಮಾಡಲಿಲ್ಲ. ಅದಕ್ಕೆ ಜನ‌ ನಿಮಗೆ ಓಟ್ ಕೊಡಬೇಕಾ? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲರಿಗೆ ಉದ್ಯೋಗ ಕೊಡಲು ಹೊಸ ಆರ್ಥಿಕ ನೀತಿ ಘೋಷಣೆ ಮಾಡಿ ಬಂದಿದ್ದೇವೆ. ನಮ್ಮ ಬಸವರಾಜ ಬೊಮ್ಮಾಯಿ ಸಾಹೇಬರು ಈ ಭೂಮಿಯವರು. ಬೊಮ್ಮಾಯಿ ಸಾಹೇಬ್ರೇ, ಯಡಿಯೂರಪ್ಪನವರು, ಜಗದೀಶ್ ಶೆಟ್ಟರ್, ಸದಾನಂದಗೌಡ ಸಿಎಂ ಆಗಿದ್ದರು.ಇದರಲ್ಲಿ ನಿಮ್ಮ ಭಾಗಕ್ಕೆ ಕೈಗಾರಿಕೆ ಕೊಡುತ್ತೇವೆ, ಉದ್ಯೋಗ ಕೊಡುತ್ತೇವೆ ಅಂತ ಬಂದಿದ್ದರು. ಪಟ್ಟಿ ಬಿಡುಗಡೆ ಮಾಡಿ ಎಂದರು.

ನಾವು ಸೋಲಾರ್, ವಿಂಡ್ ಮಿಲ್ ಎಲ್ಲಾ ಪ್ರಾರಂಭ ಮಾಡಿದೆವು.ಪಾವಗಡದಲ್ಲಿ 14,000 ಎಕರೆಯಲ್ಲಿ ವಿದ್ಯುತ್ ಉತ್ಪದನೆ ಮಾಡಿದೆವು. ನೀವು ಒಂದು ರೂಪಾಯಿ ಹಣ ಕೊಡಬೇಕಿಲ್ಲ, 200 ಯೂನಿಟ್ ಫ್ರೀ ವಿದ್ಯುತ್ ಕೊಡುತ್ತೇವೆ ಎಂದರು.

ಬಸವಣ್ಣನ ಆಣೆ, ಕುವೆಂಪು ಆಣೆ, ಕನಕದಾಸರ ಆಣೆ, ಶರೀಪರ ಆಣೆ 200 ಯುನಿಟ್ ಕರೆಂಟ್ ನಿಮ್ಮ ಮನೆಗೆ ಕೊಟ್ಟೇ ಕೊಡುತ್ತೇವೆ ಎಂದ ಅವರು, ಎಲ್ಲಿಂದ ತರ್ತಾರೆ ಕರೆಂಟ್ ಅಂತ ಸಚಿವ ಅಶೋಕ್ ಕೇಳ್ತಾರೆ, ಹಾಸ್ಪಿಟಲ್ ಬಿಲ್ ಕೊಡ್ತೇವೆ ಅಂತ ಕೋವಿಡ್ ಟೈಂ ನಲ್ಲಿ ಈ ಸರ್ಕಾರ ಹೇಳಿತ್ತು. ಅಂಥ ಸಂದರ್ಭದಲ್ಲಿಯೂ ಬೊಮ್ಮಾಯಿಯವರ ಕಣ್ಣು ತೆರೆಯಲಿಲ್ಲ. ನಾವು ಪ್ರತಿ ಮನೆ ಯಜಮಾನಿಗೆ 2000 ಕೊಡುತ್ತೇವೆ ಅಂತ ಘೋಷಣೆ ಮಾಡಿದ್ದೇವೆ.ಈಗ ಬೊಮ್ಮಾಯಿ‌ ನಾವು ಕೊಡುತ್ತೇವೆ ಅನ್ನುತ್ತಿದ್ದಾರೆ. ನಿಮ್ಮ ಚೇರ್ ಖಾಲಿ ಆಗುತ್ತಿರುವ ಬಜೆಟ್ ನಲ್ಲಿ ಕೊಡುತ್ತೀರಾ? ಎರಡು ತಿಂಗಳಾದ ಮೇಲೆ ನೀವು ಮಾಜಿ ಮುಖ್ಯಮಂತ್ರಿ ಎಂದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK  

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago