Featured

ಕಾಂಗ್ರೆಸ್ ಮಹಾ ಅಲೆ ಪ್ರಾರಂಭ :  ಪ್ರಜಾಧ್ವನಿ ಯಾತ್ರೆಯಲ್ಲಿ ಡಿ.ಕೆ. ಶಿವಕುಮಾರ್ – Vishwanews24

ಕಾಂಗ್ರೆಸ್ ಮಹಾ ಅಲೆ ಪ್ರಾರಂಭ :  ಪ್ರಜಾಧ್ವನಿ ಯಾತ್ರೆಯಲ್ಲಿ ಡಿ.ಕೆ. ಶಿವಕುಮಾರ್

ಜನರ ಧ್ವನಿ, ಭಾವನೆ ಸಮಸ್ಯೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ನಿಮಗೆ ಶಕ್ತಿ ಕೊಡೋದೇ ಪ್ರಜಾಧ್ವನಿ ಯಾತ್ರೆಯ ಉದ್ದೇಶ

ಹಾವೇರಿ: ಜನರ ಧ್ವನಿ, ಭಾವನೆ , ಜನರ ಸಮಸ್ಯೆ, ನೋವು ಎಲ್ಲದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ನಿಮಗೆ ಶಕ್ತಿ ಕೊಡೋದೇ ಪ್ರಜಾಧ್ವನಿ  ಯಾತ್ರೆಯ ಉದ್ದೇಶ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಗುರುವಾರ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈಗ ಎಲ್ಲಾ ಕಡೆ ಮಧ್ಯಾಹ್ನದ ಕಾರ್ಯಕ್ರಮದಲ್ಲಿ ಹಾವೇರಿ ಕಾರ್ಯಕ್ರಮ ಬಹಳ ಉತ್ತಮವಾಗಿ ನಡೆಯಿತು.

ಪ್ರತಿ ದಿನ ಜನರ ಸಾಗರವಾಗಿ ಕಾಂಗ್ರೆಸ್ ಮಹಾ ಅಲೆ ಪ್ರಾರಂಭವಾಗಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಕಳೆದುಕೊಂಡರು. ರೈತರ ಆದಾಯ ಡಬಲ್ ಮಾಡಲಿಲ್ಲ. ಅದಕ್ಕೆ ಜನ‌ ನಿಮಗೆ ಓಟ್ ಕೊಡಬೇಕಾ? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲರಿಗೆ ಉದ್ಯೋಗ ಕೊಡಲು ಹೊಸ ಆರ್ಥಿಕ ನೀತಿ ಘೋಷಣೆ ಮಾಡಿ ಬಂದಿದ್ದೇವೆ. ನಮ್ಮ ಬಸವರಾಜ ಬೊಮ್ಮಾಯಿ ಸಾಹೇಬರು ಈ ಭೂಮಿಯವರು. ಬೊಮ್ಮಾಯಿ ಸಾಹೇಬ್ರೇ, ಯಡಿಯೂರಪ್ಪನವರು, ಜಗದೀಶ್ ಶೆಟ್ಟರ್, ಸದಾನಂದಗೌಡ ಸಿಎಂ ಆಗಿದ್ದರು.ಇದರಲ್ಲಿ ನಿಮ್ಮ ಭಾಗಕ್ಕೆ ಕೈಗಾರಿಕೆ ಕೊಡುತ್ತೇವೆ, ಉದ್ಯೋಗ ಕೊಡುತ್ತೇವೆ ಅಂತ ಬಂದಿದ್ದರು. ಪಟ್ಟಿ ಬಿಡುಗಡೆ ಮಾಡಿ ಎಂದರು.

ನಾವು ಸೋಲಾರ್, ವಿಂಡ್ ಮಿಲ್ ಎಲ್ಲಾ ಪ್ರಾರಂಭ ಮಾಡಿದೆವು.ಪಾವಗಡದಲ್ಲಿ 14,000 ಎಕರೆಯಲ್ಲಿ ವಿದ್ಯುತ್ ಉತ್ಪದನೆ ಮಾಡಿದೆವು. ನೀವು ಒಂದು ರೂಪಾಯಿ ಹಣ ಕೊಡಬೇಕಿಲ್ಲ, 200 ಯೂನಿಟ್ ಫ್ರೀ ವಿದ್ಯುತ್ ಕೊಡುತ್ತೇವೆ ಎಂದರು.

ಬಸವಣ್ಣನ ಆಣೆ, ಕುವೆಂಪು ಆಣೆ, ಕನಕದಾಸರ ಆಣೆ, ಶರೀಪರ ಆಣೆ 200 ಯುನಿಟ್ ಕರೆಂಟ್ ನಿಮ್ಮ ಮನೆಗೆ ಕೊಟ್ಟೇ ಕೊಡುತ್ತೇವೆ ಎಂದ ಅವರು, ಎಲ್ಲಿಂದ ತರ್ತಾರೆ ಕರೆಂಟ್ ಅಂತ ಸಚಿವ ಅಶೋಕ್ ಕೇಳ್ತಾರೆ, ಹಾಸ್ಪಿಟಲ್ ಬಿಲ್ ಕೊಡ್ತೇವೆ ಅಂತ ಕೋವಿಡ್ ಟೈಂ ನಲ್ಲಿ ಈ ಸರ್ಕಾರ ಹೇಳಿತ್ತು. ಅಂಥ ಸಂದರ್ಭದಲ್ಲಿಯೂ ಬೊಮ್ಮಾಯಿಯವರ ಕಣ್ಣು ತೆರೆಯಲಿಲ್ಲ. ನಾವು ಪ್ರತಿ ಮನೆ ಯಜಮಾನಿಗೆ 2000 ಕೊಡುತ್ತೇವೆ ಅಂತ ಘೋಷಣೆ ಮಾಡಿದ್ದೇವೆ.ಈಗ ಬೊಮ್ಮಾಯಿ‌ ನಾವು ಕೊಡುತ್ತೇವೆ ಅನ್ನುತ್ತಿದ್ದಾರೆ. ನಿಮ್ಮ ಚೇರ್ ಖಾಲಿ ಆಗುತ್ತಿರುವ ಬಜೆಟ್ ನಲ್ಲಿ ಕೊಡುತ್ತೀರಾ? ಎರಡು ತಿಂಗಳಾದ ಮೇಲೆ ನೀವು ಮಾಜಿ ಮುಖ್ಯಮಂತ್ರಿ ಎಂದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK  

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago