ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ. ಬಿಜೆಪಿ ರಾಜಕೀಯ ಮಾಡಲು ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಒಟ್ಟಾಗಿ ಸಂವಿಧಾನದ ತಿದ್ದುಪಡಿ ಮಾಡಲು ಮುಂದಾಗಿದ್ದಕ್ಕೆ ಬಿಲ್ ಫೇಲ್ ಆಯ್ತು ಅಂತ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧ ಎಂಬ ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿದ ಅವರು, “ಕಾಂಗ್ರೆಸ್ ಮಹಿಳಾ ಮೀಸಲಾತಿ ಪರ ಇದೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. 2023 ರಲ್ಲಿ ಸಂಸತ್ನಲ್ಲಿ ಬಿಲ್ ಪಾಸ್ ಆಗಿದೆ. ಅದನ್ನ ಅವರು ಜಾರಿ ಮಾಡಬೇಕು. ಮುಂದಿನ ಚುನಾವಣೆಗೆ ಮೀಸಲಾತಿ ಜಾರಿ ಮಾಡಲಿ” ಎಂದರು.
ಇದನ್ನೂ ಓದಿ :
“ಬಿಜೆಪಿ ಅವರು ಸಂವಿಧಾನಕ್ಕೆ ತಿದ್ದುಪಡಿ ತರೋದಕ್ಕೆ ಹೋಗಿದ್ದಕ್ಕೆ ನಿನ್ನೆ ಬಿಲ್ ಬಿದ್ದು ಹೋಯ್ತು. ಮಹಿಳಾ ಮೀಸಲಾತಿಗೆ ಮಾತ್ರ ಸಂವಿಧಾನದ ತಿದ್ದುಪಡಿ ಮಾಡಿದ್ರೆ, ಡಿಲಿಮಿಟೇಷನ್ ಸೇರಿಸದೇ ಅದೊಂದೆ ಮಾಡಿದ್ರೆ ಪಾಸ್ ಆಗ್ತಿತ್ತು. ಅದನ್ನ ಮಿಕ್ಸ್ ಮಾಡಿ ಮಾಡಿದ್ರು. ಅದಕ್ಕೆ ಬಿದ್ದು ಹೋಯ್ತು” ಎಂದು ಹೇಳಿದರು.
“ಬಿಜೆಪಿ ಅವರು ರಾಜಕೀಯ ಮಾಡೋದಕ್ಕಾಗಿಯೇ ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಎರಡು ಒಟ್ಟಿಗೆ ತಂದರು. ನಾವು ಡಿಲಿಮಿಟೇಷನ್ಗೆ ಮಾತ್ರ ವಿರೋಧ. ನಾವು ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ” ಎಂದು ತಿಳಿಸಿದರು.
ಇದನ್ನೂ ಓದಿ :
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…