ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ. ಬಿಜೆಪಿ ರಾಜಕೀಯ ಮಾಡಲು ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಒಟ್ಟಾಗಿ ಸಂವಿಧಾನದ ತಿದ್ದುಪಡಿ ಮಾಡಲು ಮುಂದಾಗಿದ್ದಕ್ಕೆ ಬಿಲ್ ಫೇಲ್ ಆಯ್ತು ಅಂತ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧ ಎಂಬ ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿದ ಅವರು, “ಕಾಂಗ್ರೆಸ್ ಮಹಿಳಾ ಮೀಸಲಾತಿ ಪರ ಇದೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. 2023 ರಲ್ಲಿ ಸಂಸತ್ನಲ್ಲಿ ಬಿಲ್ ಪಾಸ್ ಆಗಿದೆ. ಅದನ್ನ ಅವರು ಜಾರಿ ಮಾಡಬೇಕು. ಮುಂದಿನ ಚುನಾವಣೆಗೆ ಮೀಸಲಾತಿ ಜಾರಿ ಮಾಡಲಿ” ಎಂದರು.
ಇದನ್ನೂ ಓದಿ :
“ಬಿಜೆಪಿ ಅವರು ಸಂವಿಧಾನಕ್ಕೆ ತಿದ್ದುಪಡಿ ತರೋದಕ್ಕೆ ಹೋಗಿದ್ದಕ್ಕೆ ನಿನ್ನೆ ಬಿಲ್ ಬಿದ್ದು ಹೋಯ್ತು. ಮಹಿಳಾ ಮೀಸಲಾತಿಗೆ ಮಾತ್ರ ಸಂವಿಧಾನದ ತಿದ್ದುಪಡಿ ಮಾಡಿದ್ರೆ, ಡಿಲಿಮಿಟೇಷನ್ ಸೇರಿಸದೇ ಅದೊಂದೆ ಮಾಡಿದ್ರೆ ಪಾಸ್ ಆಗ್ತಿತ್ತು. ಅದನ್ನ ಮಿಕ್ಸ್ ಮಾಡಿ ಮಾಡಿದ್ರು. ಅದಕ್ಕೆ ಬಿದ್ದು ಹೋಯ್ತು” ಎಂದು ಹೇಳಿದರು.
“ಬಿಜೆಪಿ ಅವರು ರಾಜಕೀಯ ಮಾಡೋದಕ್ಕಾಗಿಯೇ ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಎರಡು ಒಟ್ಟಿಗೆ ತಂದರು. ನಾವು ಡಿಲಿಮಿಟೇಷನ್ಗೆ ಮಾತ್ರ ವಿರೋಧ. ನಾವು ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ” ಎಂದು ತಿಳಿಸಿದರು.
ಇದನ್ನೂ ಓದಿ :
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…
ಕ್ಯಾನ್ಸರ್ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್…
ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ…
ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ…
ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್ ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…
ಕಾಪು: ಪತಿಯ ಲಾಕರ್ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಪತ್ನಿ ಉಡುಪಿ: ನಗರದಲ್ಲಿ ವಿಚಿತ್ರ ಕಳ್ಳತನ…