Featured

ಕಾಂಗ್ರೆಸ್ ಮುಕ್ತ ಜಿಲ್ಲೆಯಾದ ಕರಾವಳಿಯ ಉಡುಪಿ ಜಿಲ್ಲೆ ; ಗ್ರಾಮದಿಂದ ಜಿಲ್ಲೆಯವರೆಗೂ ಈಗ ಕಮಲದ ಕಲರವ..

ಉಡುಪಿ : ಕರಾವಳಿ ಅಂದರೆ ಸಾಕು ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳಿಗೆ ಭಯ ಆವರಿಸಿರುತ್ತದೆ. ಕರಾವಳಿ ಹಿಂದೂ ಸಂಘಟನೆಗಳ ಭದ್ರ ಕೋಟೆ ಎಂಬುವುದು ಹಳೇ ವಿಚಾರ. ಆದರೆ ಇದೀಗ ಭಾರತೀಯ ಜನತಾ ಪಕ್ಷವೂ ಕರಾವಳಿಯನ್ನು ಸಂಪೂರ್ಣವಾಗಿ ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದು ವಿರೋಧಿಗಳ ಕಣ್ಣು ಮತ್ತಷ್ಟು ಕೆಂಪಗಾಗಿಸಿದೆ.

1978ರಲ್ಲಿ ಜನಸಂಘವು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಉಡುಪಿಯಲ್ಲಿ ಪಾರುಪತ್ಯವನ್ನು ಸ್ಥಾಪಿಸಿತ್ತು. ಇಂದು ಮತ್ತೆ ಉಡುಪಿ ಜಿಲ್ಲೆ ಕಾಂಗ್ರೆಸ್ ಮುಕ್ತ ಜಿಲ್ಲೆ ಎಂಬ ಖ್ಯಾತಿಗೆ ಪಾತ್ರವಾಗಿದೆ. ಅಂದು ಮೊದಲ ಬಾರಿಗೆ ಪಕ್ಷವನ್ನು ಗೆಲ್ಲಿಸಿದ್ದ ಕೀರ್ತಿಗೆ ಪಾತ್ರವಾಗಿರುವ ಉಡುಪಿ ಇಂದು ಕಾಂಗ್ರೆಸ್ ಮುಕ್ತ ಜಿಲ್ಲೆ ಎಂಬ ಖ್ಯಾತಿಗೆ ಪಾತ್ರವಾಗಿದೆ.

ಗ್ರಾಮ ಪಂಚಾಯತ್ ನಿಂದ ಸಂಸದರವರೆಗೂ ಭಾರತೀಯ ಜನತಾ ಪಕ್ಷವೇ ಆಳುತ್ತಿತ್ತು. ಆದರೆ ಶಾಸಕರು ಹಾಗೂ ನಗರ ಸಭೆ ಮಾತ್ರ ಕಾಂಗ್ರೆಸ್ ಕೈನಲ್ಲಿತ್ತು. ಈ ಬಾರಿ ಉಡುಪಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಭಾರತೀಯ ಜನತಾ ಪಕ್ಷ ಭರ್ಜರಿ ಜಯಭೇರಿ ಭಾರಿಸುವ ಮೂಲಕ ಸಂಪೂರ್ಣ ಉಡುಪಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ನಂತರ ನಗರ ಸಭೆ ಕಾಂಗ್ರೆಸ್ ಆಡಳಿದಲ್ಲಿತ್ತು. ಇದೀಗ ನಗರಸಭೆಯೂ ಸಂಪೂರ್ಣವಾಗಿ ಬಿಜೆಪಿಮಯವಾಗಿದ್ದು ಉಡುಪಿ ಜಿಲ್ಲೆಯೇ ಕಾಂಗ್ರೆಸ್ ಮುಕ್ತ ಜಿಲ್ಲೆ ಎಂಬ ಕೀರ್ತಿಗೆ ಪಾತ್ರವಾಗಿದೆ.

ಉಡುಪಿ ಜಿಲ್ಲೆಯ 5 ವಿಧಾನಸಾಭಾ ಕ್ಷೇತ್ರಗಳ ಶಾಸಕರು, ಅಂದರೆ ಉಡುಪಿ ಶಾಸಕ ಕೆ ರಘುಪತಿ ಭಟ್, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಕಾಪು ಶಾಸಕ ಲಾಲಾಜಿ ಮೆಂಡನ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೀಗೆ 5 ಕ್ಷೇತ್ರಗಳಲ್ಲೂ ಕಮಲದ ಪತಾಕೆ ರಾರಾಜಿಸುತ್ತಿದೆ.

ಇನ್ನು ಉಡುಪಿ, ಕುಂದಾಪುರ, ಕಾರ್ಕಳ ತಾಲೂಕಿನ ತಾಲೂಕ್ ಪಂಚಾಯತ್ ಕೂಡಾ ಭಾರತೀಯ ಜನತಾ ಪಕ್ಷದ್ದಾಗಿದೆ. ಉಡುಪಿ ಜಿಲ್ಲಾ ಪಂಚಾಯತ್, ಉಡುಪಿ ನಗರಸಭೆ, ಕುಂದಾಪುರ ಹಾಗೂ ಕಾರ್ಕಳ ಪುರಸಭೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಕೂಡಾ ಭಾರತೀಯ ಜನತಾ ಪಕ್ಷದ ಅಧಿಕಾರದಲ್ಲಿದೆ.

ಇತ್ತೀಚೆಗೆ ನಡೆದಿದ್ದ ಉಡುಪಿ ನಗರಸಭೆ ಚುನಾವಣೆಯಲ್ಲಿ ಕಳೆದ 50 ವರ್ಷಗಳ ಹಿಂದಿನ ಇತಿಹಾಸವನ್ನು ಭಾರತೀಯ ಜನತಾ ಪಕ್ಷ ಮತ್ತೆ ಹೊತ್ತು ತಂದಿದ್ದು. ಉಡುಪಿ ಶಾಸಕ ಕೆ ರಘುಪತಿ ಭಟ್ ಈ ಗೆಲುವನ್ನು ಉಡುಪಿಯ ಅಭಿವೃದ್ಧಿಯ ಹರಿಕಾರ ಮಾಜಿ ಸಚಿವ ದಿ.ಡಾ.ವಿ.ಎಸ್.ಆಚಾರ್ಯರಿಗೆ ಅರ್ಪಿಸಿದ್ದರು.

ಬಿಜೆಪಿ ಭದ್ರಕೋಟೆ ಎಂದೇ ಹೆಸರಾಗಿರುವ ಕರಾವಳಿಯ ಉಡುಪಿ ಜಿಲ್ಲೆ ಸಂಪೂರ್ಣ ಕಾಂಗ್ರೆಸ್ ಮುಕ್ತ ಜಿಲ್ಲೆಯಾಗಿ ಹೊರಹೊಮ್ಮಿದ್ದು ದಕ್ಷಿಣ ಭಾರತದಲ್ಲೇ ಹೊಸ ದಾಖಲೆಯನ್ನು ಬರೆದಿದೆ. “ನಮ್ಮದು ಕಾಂಗ್ರೆಸ್ ಮುಕ್ತ ಜಿಲ್ಲೆ” ಎಂದು ಉಡುಪಿ ಬಿಜೆಪಿಗರು ಸಂಭ್ರಮಿಸುತ್ತಿದ್ದಾರೆ.

ಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಕಾಂಗ್ರೆಸ್ ಮುಕ್ತ ಭಾರತ ಎಂಬ ಸಂಕಲ್ಪವನ್ನು ಮುಂದಿಟ್ಟಿದ್ದರು. ಈ ನಿಟ್ಟಿನಲ್ಲಿ ಇಡಿಯ ಭಾರತದಲ್ಲಿ ಕಾಂಗ್ರೆಸ್ ಮುಕ್ತ ಭಾರತ ಎಂಬ ಪರಿಕಲ್ಪನೆ ಮೂಡಿತ್ತು. ಮಾತ್ರವಲ್ಲದೆ ಈ ಸ್ಲೋಗನ್ ರಾಜ್ಯಗಳಿಗೂ, ಜಿಲ್ಲೆಗಳಿಗೂ ಹಾಗೂ ಗ್ರಾಮದವರೆಗೂ ವಿಸ್ತರಿಸಿತ್ತು. ಕಾಂಗ್ರೆಸ್ ಮುಕ್ತ ಗ್ರಾಮ, ಕಾಂಗ್ರೆಸ್ ಮುಕ್ತ ಜಿಲ್ಲೆ ಎಂಬ ಪಣವನ್ನು ಕೇಸರಿ ಪಡೆಗಳು ಕಟ್ಟಿಕೊಂಡಿದ್ದವು. ಆದರೆ ಕರಾವಳಿಯ ಈ ಜಿಲ್ಲೆ ಇದೀಗ ಕಾಂಗ್ರೆಸ್ ಮುಕ್ತವಾದ ಜಿಲ್ಲೆ ಎಂಬ ಕೀರ್ತಿಗೆ ಪಾತ್ರವಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago