Featured

ಕಾಂಗ್ರೆಸ್ ಮುಕ್ತ ಭಾರತದ ಜತೆಯಲ್ಲೇ ಭ್ರಷ್ಟಚಾರ ಮುಕ್ತ ಭಾರತ ನಿರ್ಮಾಣ: ಡಿಸಿಎಂ ಅಶ್ವಥ್ ನಾರಾಯಣ್ – Vishwanews24

ಕಾಂಗ್ರೆಸ್ ಮುಕ್ತ ಭಾರತದ ಜತೆಯಲ್ಲೇ ಭ್ರಷ್ಟಚಾರ ಮುಕ್ತ ಭಾರತ ನಿರ್ಮಾಣ: ಡಿಸಿಎಂ ಅಶ್ವಥ್ ನಾರಾಯಣ್ – Vishwanews24

ಮಾಗಡಿ (ರಾಮನಗರ): ಕಾಂಗ್ರೆಸ್ ಪಕ್ಷವೆಂದರೆ ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ. ಕಾಂಗ್ರೆಸ್ ಪಕ್ಷವೆಂದರೆ ಭ್ರಷ್ಟಾಚಾರ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಗುರಿ ಸಾಧಿಸುವುದರ ಜತೆ ಜತೆಯಲ್ಲೇಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡುವುದರಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಾಗಡಿಯಲ್ಲಿ ಗುರುವಾರ ಬೆಳಗ್ಗೆ ಹಿರಿಯ ಮುಖಂಡ ಎಚ್.ಎಂ.ಕೃಷ್ಣಮೂರ್ತಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡ ನಂತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ಅಭಿವೃದ್ಧಿ ಪರ ಕಾರ್ಯಕ್ರಮಗಳ ಪ್ರವಾಹದಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುತ್ತಿದೆ. ದೇಶದ ಜನರ ನಾಡಿಮಿತಕ್ಕೆ ತಕ್ಕಂತೆ ಬಿಜೆಪಿ ಕೆಲಸ ಮಾಡುತ್ತಿರುವ ಕಾರಣಕ್ಕಾಗಿಯೇ ದೇಶಾದ್ಯಂತ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಎಲ್ಲ ಹಂತಗಳಲ್ಲೂ ಭ್ರಷ್ಟಾಚಾರ ಬೇರೂರಿತ್ತು. ಅದನ್ನು ಈಗ ಬುಡಸಮೇತ ಕಿತ್ತೊಗೆಯಲಾಗುತ್ತಿದೆ. ಬಚ್ಚಿಟ್ಟಿದ್ದ ಕಪ್ಪು ಹಣ ರಾಶಿರಾಶಿಯಾಗಿ ಹೊರಬರುತ್ತಿದೆ. ದೇಶದ ಆರ್ಥಿಕತೆಯಲ್ಲಿ, ಜಾರಿಯಾಗುತ್ತಿರುವ ಯೋಜನೆಗಳಲ್ಲಿ ಪಾರದರ್ಶಕತೆ ಬಂದಿದೆ. ಈ ಕಾರಣದಿಂದ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಜನರು ಕಾಂಗ್ರೆಸ್ ಪಕ್ಷವನ್ನು ತಮ್ಮತಮ್ಮ ಗ್ರಾಮಗಳಿಂದ ಹೊರ ಹಾಕಲಿದ್ದಾರೆಂದು ಉಪ ಮುಖ್ಯಮಂತ್ರಿ ಹೇಳಿದರು.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

1 hour ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

11 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

11 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

11 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago