ಮಾಗಡಿ (ರಾಮನಗರ): ಕಾಂಗ್ರೆಸ್ ಪಕ್ಷವೆಂದರೆ ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ. ಕಾಂಗ್ರೆಸ್ ಪಕ್ಷವೆಂದರೆ ಭ್ರಷ್ಟಾಚಾರ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಗುರಿ ಸಾಧಿಸುವುದರ ಜತೆ ಜತೆಯಲ್ಲೇಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡುವುದರಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಾಗಡಿಯಲ್ಲಿ ಗುರುವಾರ ಬೆಳಗ್ಗೆ ಹಿರಿಯ ಮುಖಂಡ ಎಚ್.ಎಂ.ಕೃಷ್ಣಮೂರ್ತಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡ ನಂತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ಅಭಿವೃದ್ಧಿ ಪರ ಕಾರ್ಯಕ್ರಮಗಳ ಪ್ರವಾಹದಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುತ್ತಿದೆ. ದೇಶದ ಜನರ ನಾಡಿಮಿತಕ್ಕೆ ತಕ್ಕಂತೆ ಬಿಜೆಪಿ ಕೆಲಸ ಮಾಡುತ್ತಿರುವ ಕಾರಣಕ್ಕಾಗಿಯೇ ದೇಶಾದ್ಯಂತ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಎಲ್ಲ ಹಂತಗಳಲ್ಲೂ ಭ್ರಷ್ಟಾಚಾರ ಬೇರೂರಿತ್ತು. ಅದನ್ನು ಈಗ ಬುಡಸಮೇತ ಕಿತ್ತೊಗೆಯಲಾಗುತ್ತಿದೆ. ಬಚ್ಚಿಟ್ಟಿದ್ದ ಕಪ್ಪು ಹಣ ರಾಶಿರಾಶಿಯಾಗಿ ಹೊರಬರುತ್ತಿದೆ. ದೇಶದ ಆರ್ಥಿಕತೆಯಲ್ಲಿ, ಜಾರಿಯಾಗುತ್ತಿರುವ ಯೋಜನೆಗಳಲ್ಲಿ ಪಾರದರ್ಶಕತೆ ಬಂದಿದೆ. ಈ ಕಾರಣದಿಂದ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಜನರು ಕಾಂಗ್ರೆಸ್ ಪಕ್ಷವನ್ನು ತಮ್ಮತಮ್ಮ ಗ್ರಾಮಗಳಿಂದ ಹೊರ ಹಾಕಲಿದ್ದಾರೆಂದು ಉಪ ಮುಖ್ಯಮಂತ್ರಿ ಹೇಳಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…