ಮಾಗಡಿ (ರಾಮನಗರ): ಕಾಂಗ್ರೆಸ್ ಪಕ್ಷವೆಂದರೆ ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ. ಕಾಂಗ್ರೆಸ್ ಪಕ್ಷವೆಂದರೆ ಭ್ರಷ್ಟಾಚಾರ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಗುರಿ ಸಾಧಿಸುವುದರ ಜತೆ ಜತೆಯಲ್ಲೇಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡುವುದರಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಾಗಡಿಯಲ್ಲಿ ಗುರುವಾರ ಬೆಳಗ್ಗೆ ಹಿರಿಯ ಮುಖಂಡ ಎಚ್.ಎಂ.ಕೃಷ್ಣಮೂರ್ತಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡ ನಂತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ಅಭಿವೃದ್ಧಿ ಪರ ಕಾರ್ಯಕ್ರಮಗಳ ಪ್ರವಾಹದಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುತ್ತಿದೆ. ದೇಶದ ಜನರ ನಾಡಿಮಿತಕ್ಕೆ ತಕ್ಕಂತೆ ಬಿಜೆಪಿ ಕೆಲಸ ಮಾಡುತ್ತಿರುವ ಕಾರಣಕ್ಕಾಗಿಯೇ ದೇಶಾದ್ಯಂತ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಎಲ್ಲ ಹಂತಗಳಲ್ಲೂ ಭ್ರಷ್ಟಾಚಾರ ಬೇರೂರಿತ್ತು. ಅದನ್ನು ಈಗ ಬುಡಸಮೇತ ಕಿತ್ತೊಗೆಯಲಾಗುತ್ತಿದೆ. ಬಚ್ಚಿಟ್ಟಿದ್ದ ಕಪ್ಪು ಹಣ ರಾಶಿರಾಶಿಯಾಗಿ ಹೊರಬರುತ್ತಿದೆ. ದೇಶದ ಆರ್ಥಿಕತೆಯಲ್ಲಿ, ಜಾರಿಯಾಗುತ್ತಿರುವ ಯೋಜನೆಗಳಲ್ಲಿ ಪಾರದರ್ಶಕತೆ ಬಂದಿದೆ. ಈ ಕಾರಣದಿಂದ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಜನರು ಕಾಂಗ್ರೆಸ್ ಪಕ್ಷವನ್ನು ತಮ್ಮತಮ್ಮ ಗ್ರಾಮಗಳಿಂದ ಹೊರ ಹಾಕಲಿದ್ದಾರೆಂದು ಉಪ ಮುಖ್ಯಮಂತ್ರಿ ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…