Featured

ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ: ಡಿಕೆಶಿ – vishwanews24

ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ  : ಡಿಕೆಶಿ

ಬೆಂಗಳೂರು, : ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬಿಬಿಎಂಪಿ ವತಿಯಿಂದ ಕಬ್ಬನ್‌ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ ಎಂದು ಹೇಳಿದರು.

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಾಹೀರಾತು ನೀಡಿದ್ದು, ನಮ ಮೇಲೆ ಕೇಸು ದಾಖಲಿಸಲಿ, ಅದನ್ನು ಎದುರಿಸುತ್ತೇವೆ. ಆದರೆ ರಾಹುಲ್‌ಗಾಂಧಿಯವರನ್ನು ಮಧ್ಯಕ್ಕೆ ತರಲು ಅವರೇನು ಕೆಪಿಸಿಸಿ ಅಥವಾ ಎಐಸಿಸಿ ಅಧ್ಯಕ್ಷರಾಗಿದ್ದರೇ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕಾಮನ್‌ಸೆನ್‌್ಸ ಇರಲಿಲ್ಲವೇ? ಅವರ ಪಕ್ಷದ ಎಂಎಲ್‌ಸಿ ಮೂಲಕ ಕೇಸು ಹಾಕಿಸಿದ್ದೇಕೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌‍ನವರು ದ್ವೇಷ ರಾಜಕಾರಣ ಮಾಡುವುದಿಲ್ಲ. ರಾಹುಲ್‌ಗಾಂಧಿಯವರಿಗೆ ಅವರದ್ದೇ ಆದ ತೊಂದರೆಗಳಿವೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಮೂಗು ತೂರಿಸುವ ಅಗತ್ಯ ಅವರಿಗಿಲ್ಲ . ಕಾಂಗ್ರೆಸ್‌‍ನವರು ದ್ವೇಷ ಸಾಧಿಸಲು ನೀಚ ರಾಜಕಾರಣ ಮಾಡುವುದಿಲ್ಲ ಎಂದರು.2028ಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಮರಳಿ ಅಧಿಕಾರಕ್ಕೆ ತಂದೇ ತರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರು ಇದಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತೇವೆ ಎಂದರು.

ನಾವು ವಿಶ್ವಮಾನವರಾಗಲು ಸಮಾಜದ ಅಭಿಪ್ರಾಯ ಮುಖ್ಯ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಹಿನ್ನಡೆಯಾಗಿರುವುದು ಹಾಗೂ ಮತದಾನ ಏಕೆ ಈ ರೀತಿ ಆಗಿದೆ ಎಂಬುದರ ಕುರಿತು ನಿನ್ನೆ ರಾತ್ರಿ ಒಕ್ಕಲಿಗ ಮುಖಂಡರ ಸಭೆಯಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಿದರು.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

28 seconds ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

39 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

47 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago