Featured

ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ: ಡಿಕೆಶಿ – vishwanews24

ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ  : ಡಿಕೆಶಿ

ಬೆಂಗಳೂರು, : ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬಿಬಿಎಂಪಿ ವತಿಯಿಂದ ಕಬ್ಬನ್‌ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ ಎಂದು ಹೇಳಿದರು.

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಾಹೀರಾತು ನೀಡಿದ್ದು, ನಮ ಮೇಲೆ ಕೇಸು ದಾಖಲಿಸಲಿ, ಅದನ್ನು ಎದುರಿಸುತ್ತೇವೆ. ಆದರೆ ರಾಹುಲ್‌ಗಾಂಧಿಯವರನ್ನು ಮಧ್ಯಕ್ಕೆ ತರಲು ಅವರೇನು ಕೆಪಿಸಿಸಿ ಅಥವಾ ಎಐಸಿಸಿ ಅಧ್ಯಕ್ಷರಾಗಿದ್ದರೇ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕಾಮನ್‌ಸೆನ್‌್ಸ ಇರಲಿಲ್ಲವೇ? ಅವರ ಪಕ್ಷದ ಎಂಎಲ್‌ಸಿ ಮೂಲಕ ಕೇಸು ಹಾಕಿಸಿದ್ದೇಕೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌‍ನವರು ದ್ವೇಷ ರಾಜಕಾರಣ ಮಾಡುವುದಿಲ್ಲ. ರಾಹುಲ್‌ಗಾಂಧಿಯವರಿಗೆ ಅವರದ್ದೇ ಆದ ತೊಂದರೆಗಳಿವೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಮೂಗು ತೂರಿಸುವ ಅಗತ್ಯ ಅವರಿಗಿಲ್ಲ . ಕಾಂಗ್ರೆಸ್‌‍ನವರು ದ್ವೇಷ ಸಾಧಿಸಲು ನೀಚ ರಾಜಕಾರಣ ಮಾಡುವುದಿಲ್ಲ ಎಂದರು.2028ಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಮರಳಿ ಅಧಿಕಾರಕ್ಕೆ ತಂದೇ ತರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರು ಇದಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತೇವೆ ಎಂದರು.

ನಾವು ವಿಶ್ವಮಾನವರಾಗಲು ಸಮಾಜದ ಅಭಿಪ್ರಾಯ ಮುಖ್ಯ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಹಿನ್ನಡೆಯಾಗಿರುವುದು ಹಾಗೂ ಮತದಾನ ಏಕೆ ಈ ರೀತಿ ಆಗಿದೆ ಎಂಬುದರ ಕುರಿತು ನಿನ್ನೆ ರಾತ್ರಿ ಒಕ್ಕಲಿಗ ಮುಖಂಡರ ಸಭೆಯಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

8 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

8 hours ago