ಚಿಂಚೋಳಿ : ರಾಜ್ಯದಿಂದ ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಸಹಾ ರಾಜ್ಯದ ಪರವಾಗಿ ಯಾವುದೇ ಹೋರಾಟ ನಡೆಸಲಿಲ್ಲ. ಕನ್ನಡಿಗರ ಪರವಾಗಿ ಕೇಂದ್ರಕ್ಕೆ ಒಂದು ಪತ್ರವನ್ನು ಬರೆಯಲ್ಲಿಲ್ಲ. ಬೀದರ್ ಸಂಸದ ಭಗವಂತ ಖುಬಾ, ಕಲಬುರಗಿ ಡಾ. ಉಮೇಶ ಜಾಧವ್, ಶಾಸಕ ಡಾ. ಅವಿನಾಶ ಜಾಧವ್ ತ್ರಿಬಲ್ ಇಂಜಿನ್ ಸರಕಾರ ಇದ್ದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ, ಮನ್ ಕಿ ಬಾತ್ ಕೇಳಲಿಲ್ಲ. ಕಾಂಗ್ರೆಸ್ ಪಕ್ಷ ಬಡವರ ಬದುಕು ಕಟ್ಟುವುದಾಗಿದೆ. ಆದರೆ, ಬಿಜೆಪಿ ಭಾವನಾತ್ಮಕ ವಿಚಾರ ಮೂಡಿಸುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಅವರು, ಪಟ್ಟಣದ ಶ್ರೀ ಚೆನ್ನಕಲ್ಯಾಣ ಮಂಟಪದಲ್ಲಿ ಸೋಮವಾರ ಬೀದರ್ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಹಣ ಬಡವರಿಗೆ ನೀಡಲಾಗುತ್ತಿದೆ. ಇದಕ್ಕಾಗಿ ೫೨ ಸಾವಿರ ಕೋಟಿ ರು. ಖರ್ಚು ಮಾಡಲಾಗುತ್ತಿದೆ. ಕಾಂಗ್ರೆಸ್ ಯಾವಾಗಲೂ ಬಡವರಿಗೋಸ್ಕರ ಕೆಲಸ ಮಾಡುತ್ತಿದೆ. ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ನೆರವು ನೀಡುವಂತೆ ಮನವಿ ಮಾಡಿದರೂ ಸಹ ರಾಜ್ಯದ ಜನರ ಹಿತ ಕಾಪಾಡಲಿಲ್ಲ ನಮ್ಮ ತೆರಿಗೆ ನಮ್ಮ ಹಕ್ಕು ಬಗ್ಗೆ ಸುಪ್ರೀಂಕೋರ್ಟ್ ಮೋರೆ ಹೋಗಲಾಗಿತ್ತು. ಇದೀಗ ಉಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ. ಬೀದರ್ ಲೋಕಸಭಾ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಭಗವಂತ ಖುಬಾ ಏನು ಆಭಿವೃದ್ಧಿ ಸಾಧನೆ ಮಾಡಿಲ್ಲ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಅವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಅಬ್ದುಲ್ ರವೂಪ ಮಿರಿಯಾಣ, ಬಾಬುರಾವ ಪಾಟೀಲ,ದೀಪಕನಾಗ ಪುಣ್ಯಶೆಟ್ಟಿ,ಅಜೀತ ಪಾಟೀಲ,ಭೀಮರಾವ ತೇಗಲತಿಪ್ಪಿ,ಬಸಯ್ಯ ಗುತ್ತೆದಾರ,ಮಹೆಮೂದ ಪಟೇಲ,ಬಾಸೀತ,ಆನಂದ ಟೈಗರ,ಶಬ್ಬೀರ ಅಹೆಮದ,ಸುರೇಶ ಬಂಟಾ, ಪ್ರಭುಲಿಂಗ ಲೇವಡಿ, ಚಿರಂಜೀವಿ, ನರಸಿಂಹಲು ಕುಂಬಾರ, ಮಲ್ಲಿಕಾರ್ಜುನರೆಡ್ಡಿ ನರನಾಳ, ಮಲ್ಲಿಕಾರ್ಜುನ ಕೋಲಕುಂದಿ, ಜಗದೇವ ಗೌತಮ ಇನ್ನಿತರಿದ್ದರು.
ಬಿಜೆಪಿ, ಜೆಡಿಎಸ್ ಅನೇಕ ಕಾರ್ಯಕರ್ತರು ತಮ್ಮ ಪಕ್ಷವನ್ನು ತೊರೆದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ ಪಕ್ಷಕ್ಕೆ ಸೇರ್ಪಡೆಯಾದರು ಎಲ್ಲರಿಗೂ ಕಾಂಗ್ರೆಸ ಪಕ್ಷದ ಧ್ವಜ ಮತ್ತು ಶಾಲು ಹಾಕಿ ಸ್ವಾಗತಿಸಿದರು.
ಚಿಂಚೋಳಿ ಮೀಸಲು ಮತಕ್ಷೇತ್ರದಿಂದ ೨೦೨೩ರಲ್ಲಿ ಕಾಂಗ್ರೆಸ ಪಕ್ಷದ ಅಭ್ಯರ್ಥಿ ಸುಭಾಷ ರಾಠೋಡ ಅಲ್ಪಮತಗಳಿಂದ ಸೋತಿದ್ದರು ಅವರೇ ಚಿಂಚೋಳಿ ಶಾಸಕರಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…