ಬೆಂಗಳೂರು: ದೆಹಲಿಯಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿ ಕುರಿತ ಪ್ರತಿಭಟನೆಗಳ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಈ ನಡುವೆ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರತಿಕ್ರಿಯೆ ನೀಡಿದ ಅವರು, ‘ಕಾಂಗ್ರೆಸ್ ವಿದ್ಯಾರ್ಥಿಗಳ ಹಿತ ಕಾಪಾಡುವ ಉದ್ದೇಶದಿಂದ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿಸಲು ಮಾತ್ರ ಪ್ರತಿಭಟನೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸುವ ಬದಲು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಅವರು ಟೀಕಿಸಿದರು.
ತಪ್ಪಿತಸ್ಥರು ಯಾರೇ ಆಗಿರಲಿ, ಯಾವುದೇ ಪಕ್ಷದವರಾಗಿರಲಿ ಅವರನ್ನು ಪ್ರೋತ್ಸಾಹಿಸುವ, ರಕ್ಷಿಸುವ ಹಾಗೂ ಬೆಂಬಲಿಸುವ ಕೆಲಸವನ್ನು ಕಾಂಗ್ರೆಸ್ ಎಂದಿಗೂ ಮಾಡಿಲ್ಲ. ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ, ಆ ವ್ಯಕ್ತಿಯನ್ನು ತಕ್ಷಣವೇ ಬಂಧಿಸಿ, ಪ್ರಕರಣ ದಾಖಲಿಸಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಆದರೆ ಚರ್ಚಿಸಬೇಕಾದ ಮುಖ್ಯ ವಿಷಯ ಬೇರೆಯೇ ಇದೆ. ವಿದ್ಯಾರ್ಥಿಗಳ ಭವಿಷ್ಯದ ಹಿತರಕ್ಷಣೆಯ ಕುರಿತು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಪ್ರತಿಭಟಿಸುವುದು ಹಾಸ್ಯಾಸ್ಪದ ಮಾತ್ರವಲ್ಲ ಅತ್ಯಂತ ಬಾಲಿಶತನದ್ದು. ಕಾಂಗ್ರೆಸ್ ವಿದ್ಯಾರ್ಥಿಗಳ ಹಿತ ಕಾಯಲು ಪ್ರತಿಭಟಿಸಿದರೆ ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ.
ಇದು ವಿದ್ಯಾರ್ಥಿಗಳ ಬಗ್ಗೆ, ಅವರ ಭವಿಷ್ಯದ ಬಗ್ಗೆ ಬಿಜೆಪಿಗಿರುವ ನಿರ್ಲಕ್ಷ್ಯತನವನ್ನು ನಿರೂಪಿಸುತ್ತದೆ. ಬಿಜೆಪಿ ನಾಯಕರೇ, ನೀವು ಪ್ರತಿಭಟಿಸುವುದೇ ಆದರೆ ಕೇಂದ್ರದ ಅಸಮರ್ಥ ಶಿಕ್ಷಣ ಸಚಿವರ ರಾಜಿನಾಮೆಗಾಗಿ ಪ್ರತಿಭಟಿಸಿ, NEET ಅವ್ಯವಸ್ಥೆಯನ್ನು ಸರಿಪಡಿಸಲು ಪ್ರತಿಭಟಿಸಿ, ಯುವಜನರ ಉದ್ಯೋಗ ಭದ್ರತೆ, ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ಪ್ರತಿಭಟಿಸಿ.. ಹೀಗೆ ಮಾಡಿದಲ್ಲಿ ನೀವು ಕಳೆದುಕೊಂಡಿರುವ ಜನರ ವಿಶ್ವಾಸವನ್ನು ಸ್ವಲ್ಪವಾದರೂ ಗಳಿಸಬಹುದು.”ಎಂದು ಅವರು ಹೇಳಿದರು.
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…