Featured

ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲ್ಲ: ಸಿದ್ದರಾಮಯ್ಯ – Vishwanews24

ನವದೆಹಲಿ : ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ ಗೆ ಬಿಟ್ಟುಕೊಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳುವುದರ ಮೂಲಕ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರ ಕಾಂಗ್ರೆಸ್ ನ ಪಾಲಾಗುವುದು ಖಚಿತ ಎನ್ನಲಾಗಿದೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಬೇಡಿ ಎಂದಿದ್ದೇನೆ. ವರಿಷ್ಠರಿಗೆ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ್ದೇನೆ. ಸ್ಕ್ರೀನಿಂಗ್ ಸಮಿತಿ ಅಜೆಂಡಾ ಗೊತ್ತಿಲ್ಲ. ರಾಜ್ಯದಿಂದ ಪಟ್ಟಿ ಬಂದಿದೆ ಆ ಪಟ್ಟಿ ಆಧರಿಸಿ ಚರ್ಚೆ ನಡೆಸಿದ್ದೇನೆ. ಹಾಲಿ ಸಂಸದರ ಕ್ಷೇತ್ರಗಳು ಹೊರತು ಪಡಿಸಿ ಚರ್ಚೆ ಮಾಡುತ್ತೇವೆ’ ಎಂದು ಹೇಳಿದ್ದಾರೆ.

ಇದೇ ವೇಳೆ ಮಂಡ್ಯದಿಂದ ಸುಮಲತಾ ಅವರಿಗೆ ಸಿದ್ದರಾಮಯ್ಯ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಸುಮಲತಾಗೆ ಕಾಂಗ್ರೆಸ್​ನಿಂದ ಟಿಕೆಟ್​ ನೀಡುವುದಿಲ್ಲ ಎಂದು ಹೇಳಿದ್ದೇ ನಾನು. ಅಲ್ಲಿನ ಸ್ಪರ್ಧೆಯ ಬಗ್ಗೆ ಈ ಮೊದಲೇ ನಿರ್ಧಾರವಾಗಿತ್ತು. ಹಾಗಿದ್ದಮೇಲೆ ನಾನ್ಯಾಕೆ ಸುಮಲತಾಗೆ ಪರೋಕ್ಷ ಬೆಂಬಲ ನೀಡುತ್ತೇನೆ? ಹಾಗೇನಾದರೂ ಇದ್ದಿದ್ದರೆ ನೇರವಾಗೇ ಹೇಳುತ್ತಿದ್ದೆ ಎಂದರು.

ಕಾಂಗ್ರೆಸ್ ಹಾಲಿ ಸಂಸದರ ಕ್ಷೇತ್ರಗಳನ್ನು ಬಿಟ್ಟುಕೊಡವುದಿಲ್ಲ ಎಂಬ ಸ್ಪಷ್ಟ ಸಂದೇಶದ ನಡುವೆಯೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಕ್ಷೇತ್ರಗಳಿಗೆ ಜೆಡಿಎಸ್ ಒತ್ತಡ ಹಾಕುತ್ತಿರುವ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

7 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

7 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

7 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

7 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

10 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

10 hours ago