ನವದೆಹಲಿ : ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳುವುದರ ಮೂಲಕ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರ ಕಾಂಗ್ರೆಸ್ ನ ಪಾಲಾಗುವುದು ಖಚಿತ ಎನ್ನಲಾಗಿದೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಬೇಡಿ ಎಂದಿದ್ದೇನೆ. ವರಿಷ್ಠರಿಗೆ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ್ದೇನೆ. ಸ್ಕ್ರೀನಿಂಗ್ ಸಮಿತಿ ಅಜೆಂಡಾ ಗೊತ್ತಿಲ್ಲ. ರಾಜ್ಯದಿಂದ ಪಟ್ಟಿ ಬಂದಿದೆ ಆ ಪಟ್ಟಿ ಆಧರಿಸಿ ಚರ್ಚೆ ನಡೆಸಿದ್ದೇನೆ. ಹಾಲಿ ಸಂಸದರ ಕ್ಷೇತ್ರಗಳು ಹೊರತು ಪಡಿಸಿ ಚರ್ಚೆ ಮಾಡುತ್ತೇವೆ’ ಎಂದು ಹೇಳಿದ್ದಾರೆ.
ಇದೇ ವೇಳೆ ಮಂಡ್ಯದಿಂದ ಸುಮಲತಾ ಅವರಿಗೆ ಸಿದ್ದರಾಮಯ್ಯ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಸುಮಲತಾಗೆ ಕಾಂಗ್ರೆಸ್ನಿಂದ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದ್ದೇ ನಾನು. ಅಲ್ಲಿನ ಸ್ಪರ್ಧೆಯ ಬಗ್ಗೆ ಈ ಮೊದಲೇ ನಿರ್ಧಾರವಾಗಿತ್ತು. ಹಾಗಿದ್ದಮೇಲೆ ನಾನ್ಯಾಕೆ ಸುಮಲತಾಗೆ ಪರೋಕ್ಷ ಬೆಂಬಲ ನೀಡುತ್ತೇನೆ? ಹಾಗೇನಾದರೂ ಇದ್ದಿದ್ದರೆ ನೇರವಾಗೇ ಹೇಳುತ್ತಿದ್ದೆ ಎಂದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…