ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.
ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಗಂಭೀರ ವಿಚಾರ ಮತ್ತು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು. ನಿನ್ನೆ ವಿದ್ಯಾರಣ್ಯಪುರದಲ್ಲಿ ರಾಮನವಮಿ ಇತ್ತು. ರಾಮ ಈ ದೇಶದ ಆದರ್ಶ ಪುರುಷ. ಶ್ರೀರಾಮ ಮಂದಿರವೂ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ “ಜೈ ಶ್ರೀರಾಮ್” ಎಂದು ಕೂಗಿದ್ದನ್ನು ಆಕ್ಷೇಪಿಸಿ ಮುಸ್ಲಿಂ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಿ “ಅಲ್ಲಾ ಹೋ ಅಕ್ಬರ್” ಕೂಗಬೇಕು ಎಂದು ಧಮ್ಕಿ ಹಾಕಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಇದರಿಂದ ನಾವು ಹಿಂದೂಸ್ತಾನದಲ್ಲಿ ಇದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ ಎಂಬ ಸಂದೇಹ ಕಾಡುವಂತಾಗಿದೆ ಎಂದು ನುಡಿದರು.
ಹಿಂದೂಗಳನ್ನು ಈ ಥರ ಬೈದು ಬೈದು ರಾಜ್ಯದಲ್ಲಿ ಮುಸ್ಲಿಂ ಭಯೋತ್ಪಾದನಾ ಚಟುವಟಿಕೆಗಳು ಜಾಸ್ತಿಯಾಗಿವೆ. ಶ್ರೀರಾಮ ಮಂದಿರಕ್ಕೆ ಹೋಗುವ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಲಾಗುತ್ತಿದೆ. ಮಂಡ್ಯದಲ್ಲಿ ಹಾರಾಡುತ್ತಿದ್ದ ಹನುಮಧ್ವಜವನ್ನು ಕಿತ್ತು ಹಾಕಿದ್ದೀರಿ. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಕರ್ನಾಟಕದಲ್ಲಿ ಹಿಂದೂಗಳು ಭಯದಿಂದ ಬದುಕುವಂಥ ವಾತಾವರಣವನ್ನು ಸಿದ್ದರಾಮಯ್ಯ ಆಂಡ್ ಗ್ಯಾಂಗ್ ಮಾಡುವುದನ್ನು ಖಂಡಿಸುವುದಾಗಿ ಹೇಳಿದರು.
ಇಂಥ ಘಟನೆಗಳಿಗೆ ಕಾರಣವಾದ ಈ ಸರಕಾರ ಬಹಳ ದಿನ ಉಳಿಯುವುದಿಲ್ಲ. ಇದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ಸರಕಾರ ಎಂದು ಬ್ರಾಂಡ್ ಆಗಿದೆ. ಇದು ಜನಕ್ಕೆ ಗೊತ್ತಾಗಿದೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಜನರು ಇವರಿಗೆ ಪಾಠ ಕಲಿಸುತ್ತಾರೆ ಎಂದರು. ನಿಮ್ಮ ಏಕೈಕ ಎಂಪಿ, ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಂಸತ್ತಿನಲ್ಲಿ ಏನು ಮಾಡಿದ್ದಾರೆ? ಕರ್ನಾಟಕದ ಪರವಾಗಿ ಬಾಯಿ ಬಿಟ್ಟೇ ಇಲ್ಲ; ನೀವೇನು ಮಾಡಿದ್ದೀರಿ ಎಂದು ರಾಜ್ಯದ ಜನರು ಕೇಳುತ್ತಿದ್ದಾರೆ ಎಂದು ತಿಳಿಸಿದರು.
ಹಿಂದೂಗಳ ರಕ್ಷಣೆ ಬಗ್ಗೆ ಆತಂಕ ಉಂಟಾಗಿದೆ. ದರಿದ್ರ ಸರಕಾರ ಇದು. ನಯಾಪೈಸೆ ಹಣ ಇಲ್ಲ. ಮೇ ಜೂನ್ ನಂತರ ಸಂಬಳ ಕೊಡಲು ದುಡ್ಡಿಲ್ಲ ಎಂಬ ಸ್ಥಿತಿ ಬಂದಿದೆ. ಪಿಂಚಣಿ, ಸ್ಕಾಲರ್ಶಿಪ್ ಕೊಟ್ಟಿಲ್ಲ. ಇದರ ಜೊತೆಗೆ ಕರ್ನಾಟಕದ ಶಾಂತಿಯ ತೋಟವನ್ನು ಮತಕ್ಕಾಗಿ ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದರ ವಿರುದ್ಧ ಹೋರಾಟ ಮುಂದುವರಿಸಲಿದ್ದೇವೆ ಎಂದು ಎಚ್ಚರಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…