ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.
ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಗಂಭೀರ ವಿಚಾರ ಮತ್ತು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು. ನಿನ್ನೆ ವಿದ್ಯಾರಣ್ಯಪುರದಲ್ಲಿ ರಾಮನವಮಿ ಇತ್ತು. ರಾಮ ಈ ದೇಶದ ಆದರ್ಶ ಪುರುಷ. ಶ್ರೀರಾಮ ಮಂದಿರವೂ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ “ಜೈ ಶ್ರೀರಾಮ್” ಎಂದು ಕೂಗಿದ್ದನ್ನು ಆಕ್ಷೇಪಿಸಿ ಮುಸ್ಲಿಂ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಿ “ಅಲ್ಲಾ ಹೋ ಅಕ್ಬರ್” ಕೂಗಬೇಕು ಎಂದು ಧಮ್ಕಿ ಹಾಕಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಇದರಿಂದ ನಾವು ಹಿಂದೂಸ್ತಾನದಲ್ಲಿ ಇದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ ಎಂಬ ಸಂದೇಹ ಕಾಡುವಂತಾಗಿದೆ ಎಂದು ನುಡಿದರು.
ಹಿಂದೂಗಳನ್ನು ಈ ಥರ ಬೈದು ಬೈದು ರಾಜ್ಯದಲ್ಲಿ ಮುಸ್ಲಿಂ ಭಯೋತ್ಪಾದನಾ ಚಟುವಟಿಕೆಗಳು ಜಾಸ್ತಿಯಾಗಿವೆ. ಶ್ರೀರಾಮ ಮಂದಿರಕ್ಕೆ ಹೋಗುವ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಲಾಗುತ್ತಿದೆ. ಮಂಡ್ಯದಲ್ಲಿ ಹಾರಾಡುತ್ತಿದ್ದ ಹನುಮಧ್ವಜವನ್ನು ಕಿತ್ತು ಹಾಕಿದ್ದೀರಿ. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಕರ್ನಾಟಕದಲ್ಲಿ ಹಿಂದೂಗಳು ಭಯದಿಂದ ಬದುಕುವಂಥ ವಾತಾವರಣವನ್ನು ಸಿದ್ದರಾಮಯ್ಯ ಆಂಡ್ ಗ್ಯಾಂಗ್ ಮಾಡುವುದನ್ನು ಖಂಡಿಸುವುದಾಗಿ ಹೇಳಿದರು.
ಇಂಥ ಘಟನೆಗಳಿಗೆ ಕಾರಣವಾದ ಈ ಸರಕಾರ ಬಹಳ ದಿನ ಉಳಿಯುವುದಿಲ್ಲ. ಇದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ಸರಕಾರ ಎಂದು ಬ್ರಾಂಡ್ ಆಗಿದೆ. ಇದು ಜನಕ್ಕೆ ಗೊತ್ತಾಗಿದೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಜನರು ಇವರಿಗೆ ಪಾಠ ಕಲಿಸುತ್ತಾರೆ ಎಂದರು. ನಿಮ್ಮ ಏಕೈಕ ಎಂಪಿ, ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಂಸತ್ತಿನಲ್ಲಿ ಏನು ಮಾಡಿದ್ದಾರೆ? ಕರ್ನಾಟಕದ ಪರವಾಗಿ ಬಾಯಿ ಬಿಟ್ಟೇ ಇಲ್ಲ; ನೀವೇನು ಮಾಡಿದ್ದೀರಿ ಎಂದು ರಾಜ್ಯದ ಜನರು ಕೇಳುತ್ತಿದ್ದಾರೆ ಎಂದು ತಿಳಿಸಿದರು.
ಹಿಂದೂಗಳ ರಕ್ಷಣೆ ಬಗ್ಗೆ ಆತಂಕ ಉಂಟಾಗಿದೆ. ದರಿದ್ರ ಸರಕಾರ ಇದು. ನಯಾಪೈಸೆ ಹಣ ಇಲ್ಲ. ಮೇ ಜೂನ್ ನಂತರ ಸಂಬಳ ಕೊಡಲು ದುಡ್ಡಿಲ್ಲ ಎಂಬ ಸ್ಥಿತಿ ಬಂದಿದೆ. ಪಿಂಚಣಿ, ಸ್ಕಾಲರ್ಶಿಪ್ ಕೊಟ್ಟಿಲ್ಲ. ಇದರ ಜೊತೆಗೆ ಕರ್ನಾಟಕದ ಶಾಂತಿಯ ತೋಟವನ್ನು ಮತಕ್ಕಾಗಿ ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದರ ವಿರುದ್ಧ ಹೋರಾಟ ಮುಂದುವರಿಸಲಿದ್ದೇವೆ ಎಂದು ಎಚ್ಚರಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…