Featured

ಕಾಂಗ್ರೆಸ್ ಸರಕಾರ ಮಾಡಿದ್ದು “ಗರೀಬಿ ಹಠಾವೋ” ಆದರೆ, ಬಿಜೆಪಿ ಮಾಡುತ್ತಿರುವುದು “ಗರೀಬೋಂಕೊ ಹಠಾವೋ” : ಯು.ಟಿ. ಖಾದರ್ -Vishwanews24

ಕಾಂಗ್ರೆಸ್ ಸರಕಾರ ಮಾಡಿದ್ದು “ಗರೀಬಿ ಹಠಾವೋ” ಆದರೆ, ಬಿಜೆಪಿ ಮಾಡುತ್ತಿರುವುದು “ಗರೀಬೋಂಕೊ ಹಠಾವೋ” : ಯು.ಟಿ. ಖಾದರ್ -Vishwanews24

ಮಂಗಳೂರು: ಆಹಾರ ಸಚಿವ ಉಮೇಶ್ ಕತ್ತಿ ಅವರು ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ನೀಡಿದ ಹೇಳಿಕೆಗೆ ಮಾಜಿ ಆಹಾರ ಸಚಿವ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯು.ಟಿ.ಖಾದರ್, ಟಿವಿ-ಫ್ರಿಡ್ಜ್, ಬೈಕ್ ಇದ್ದರೆ ಕಾರ್ಡ್ ರದ್ದು ಮಾಡುವುದಾಗಿ ಹೇಳುತ್ತಿದ್ದಾರೆ. ಆ ಪಟ್ಟಿಯಲ್ಲಿ ಮೊಬೈಲ್ ಸೇರಿಸಿದ್ರೆ ಎಲ್ಲ BPL ಕಾರ್ಡ್ ರದ್ದು ಆಗುತ್ತಿತ್ತು. ಮೊಬೈಲ್ ಇಲ್ಲದ ಮನೆಗಳು ಹೇಗೆ ಇಲ್ಲವೋ, ಹಾಗೆಯೇ ಟಿವಿ, ಫ್ರಿಡ್ಜ್, ಬೈಕ್ ಇಲ್ಲದ ಮನೆಗಳಿಲ್ಲ ಎಂದರು.

ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಮಹಿಳೆಯರ ಮೇಲಿನ ದೌರ್ಜನ್ಯ : ಸಿದ್ದರಾಮಯ್ಯ -Vishwanews24

ಈ ಸರಕಾರಕ್ಕೆ ಜನಸಾಮಾನ್ಯರ ನಾಡಿಮಿಡಿತ ಇನ್ನೂ ಗೊತ್ತಾಗಿಲ್ಲ. ಮೊದಲು ರೇಷನ್ ಕಾರ್ಡ್ ಜನರಿಗೆ ತಲುಪಿಸುವ ಕೆಲಸ ಮಾಡಲಿ ಎಂದು ಹೇಳಿದ ಅವರು, ಈ ಹಿಂದೆಯೂ ಬಿಜೆಪಿ ಸರಕಾರವಿದ್ದಾಗ 15 ಮಾನದಂಡಗಳಿದ್ದವು. ಬಿಜೆಪಿ ಸರಕಾರದ ಅವಧಿಯಲ್ಲಿ 500 ರೂ. ಕರೆಂಟ್ ಬಿಲ್ ಬಂದ್ರೂ ಬಿಪಿಎಲ್ ರದ್ದು ಆಗುತ್ತಿದ್ದವು. ಆದ್ರೆ, ಕಾಂಗ್ರೆಸ್ ಕೇವಲ ಮೂರು ಮಾನದಂಡಗಳನ್ನಷ್ಟೇ ನಿರ್ಧರಿಸಿತ್ತು. ಖುದ್ದು ನಾನೇ ಆಹಾರ ಸಚಿವನಾಗಿದ್ದಾಗ ಈ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿತ್ತು ಎಂದರು.

ಇನ್ನು, ಬಿಜೆಪಿ ಸರಕಾರ ಇದಕ್ಕಿಂತ ಉತ್ತಮ ಯೋಜನೆ ನೀಡುವ ಕೆಲಸ ಮಾಡಲಿ. ತಪ್ಪನ್ನು ಸರಿಪಡಿಸುವ ಬದಲು ಬಿಜೆಪಿ ಸರಕಾರ ಮತ್ತೆ ಮತ್ತೆ ತಪ್ಪು ಮಾಡುತ್ತಿದೆ. ರಾಜ್ಯ, ಕೇಂದ್ರ ಸರಕಾರ ಸೇರಿ ಬಡವರ ಯೋಜನೆಯನ್ನು ನಾಶ ಮಾಡಲು ಮುಂದಾಗಿದೆ. ಕಾಂಗ್ರೆಸ್ ಸರಕಾರ ಮಾಡಿದ್ದು “ಗರೀಬಿ ಹಠಾವೋ”. ಆದರೆ, ಬಿಜೆಪಿ ಮಾಡುತ್ತಿರುವುದು “ಗರೀಬೋಂಕೊ ಹಠಾವೋ”. ಸರಕಾರದ ಈ ಕೆಟ್ಟ ನಿರ್ಧಾರದ ಬಗ್ಗೆ ನಾನು ಸಚಿವರ ಜೊತೆ ಮಾತನಾಡುತ್ತೇನೆ. ಈ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಸರಕಾರ ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಕೃಷಿ ಇಲಾಖೆಗೆ ನೂತನ ರಾಯಭಾರಿಯಾಗಿ ನಟ ದರ್ಶನ್‌ ಆಯ್ಕೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

15 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

15 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

15 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

15 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

16 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

17 hours ago