Featured

ಕಾಂಗ್ರೆಸ್ ಸರ್ಕಾರದಲ್ಲಿಯೂ 40% ಕಮಿಷನ್ ಮುಂದುವರಿದಿದೆ :  ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ – Vishwanews24

ಕಾಂಗ್ರೆಸ್ ಸರ್ಕಾರದಲ್ಲಿಯೂ 40% ಕಮಿಷನ್ ಮುಂದುವರಿದಿದೆ :  ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ

ಬೆಂಗಳೂರು: 40% ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿಯೂ ಮುಂದುವರಿದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದ್ದಾರೆ.

ಚಾಮರಾಜಪೇಟೆಯ ಗುತ್ತಿಗೆದಾರರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಕರೆದಿರೋ ಪ್ಯಾಕೇಜ್ ಟೆಂಡರ್ ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು. ಜೊತೆಗೆ ಪ್ರತಿಯೊಂದು ಕಾಮಗಾರಿಗೂ ಪ್ರತ್ಯೇಕ ಟೆಂಡರ್ ಕರೆಯಬೇಕು ಎಂದು ಇದೇ ವೇಳೆ ಒತ್ತಾಯ ಮಾಡಿದರು.

ತಕ್ಷಣ ಪ್ಯಾಕೇಜ್ ಸಿಸ್ಟಮ್ ಸ್ಟಾಪ್ ಮಾಡಿ ಪ್ರತ್ಯೇಕ ಟೆಂಡರ್ ಕರೆಯಬೇಕು. ಕೋಲಾರದಲ್ಲಿ ಪ್ಯಾಕೇಜ್ ಟೆಂಡರ್ ಕರೆದಿದ್ದಾರೆ ಬೇರೆ ಜಿಲ್ಲೆಗಳಲ್ಲೂ ಕರೆದಿದ್ದಾರೆ. ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಶುರುವಾಗಿದೆ. ಅಧಿಕಾರಿಗಳು ದುಡ್ಡು ಕಲೆಕ್ಟ್ ಮಾಡಿ ರಾಜಕಾರಣಿಗಳಿಗೆ ಕೊಡುತ್ತಿದ್ದಾರೆ. ಈ ಹಿಂದೆ ರಾಜಕಾರಣಿಗಳು ನೇರವಾಗಿ ಕಮಿಷನ್ ತೆಗೆದುಕೊಳ್ಳುತ್ತಿದ್ದರು. ಈಗ ಅಧಿಕಾರಿಗಳು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ 40% ಕಮಿಷನ್ ಈಗಲೂ ಮುಂದುವರಿದಿದೆ ಎಂದು ದೂರಿದ್ದಾರೆ.

ಅರ್ಹ ಗುತ್ತಿಗೆದಾರರಿಗೆ ಅನ್ಯಾಯ: ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಅನಾವಶ್ಯಕ ಪ್ಯಾಕೇಜ್ ಟೆಂಡರ್‍ಗಳನ್ನು ಕೂಡಲೇ ಸರ್ಕಾರ ರದ್ದುಗೊಳಿಸಬೇಕು. ಈಗಾಗಲೇ ಹಲವು ಬಾರಿ ಸಿಎಂ ಅವರನ್ನ ಭೇಟಿ ಮಾಡಿದ್ದೇವೆ. ಪ್ಯಾಕೇಜ್ ಟೆಂಡರ್ ರದ್ದುಮಾಡುವಂತೆ ಮನವಿ ಮಾಡಿದ್ದೇವೆ. ಹತ್ತಾರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ್ದೇವೆ. ಮುಖ್ಯ ಎಂಜಿನಿಯರ್ ಅವರನ್ನ ಪ್ರಶ್ನೆ ಮಾಡಿದ್ರೆ ಮೇಲಾಧಿಕಾರಿಗಳ ಕಡೆ ತೋರಿಸುತ್ತಾರೆ. ಅವರನ್ನ ಕೇಳಿದ್ರೆ ಸಚಿವರು, ಶಾಸಕರ ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ ಎಂದರು.

ಪೊಲೀಸ್ ವಸತಿ ಗೃಹ ಅಭಿವೃದ್ಧಿ ನಿಗಮ, ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಲವು ಇಲಾಖೆಗಳಲ್ಲಿ ಪ್ಯಾಕೇಜ್ ಟೆಂಡರ್ ಆಹ್ವಾನ ಬಂದಿದೆ. ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಮೋಸಗಳಾಗುತ್ತಿದೆ. ನೆರೆ ರಾಜ್ಯದ ಗುತ್ತಿಗೆ ಅನಕೂಲ ಮಾಡಿಕೊಡಲು ಪ್ಯಾಕೇಜ್ ಟೆಂಡರ್ ಮಾಡುತ್ತಿದ್ದಾರೆ. ಪ್ಯಾಕೇಜ್ ಟೆಂಡರ್ ಪದ್ಧತಿ ಭ್ರಷ್ಟಾಚಾರಕ್ಕೆ ಆಸ್ಪದವಾಗಿದೆ. ತಮ್ಮ ಅಪ್ತರಾದ ಗುತ್ತಿಗೆ ಕಾಮಗಾರಿ ನೀಡಲು ಮುಂದಾಗಿದ್ದಾರೆ. ಇದರಿಂದ ಅರ್ಹ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಎಲ್ಲಾ ರೀತಿಯ ಕಾಮಗಾರಿಗಳ ಟೆಂಡರ್ ಮೂಲಕ ಹಂಚಿಕೆ ಮಾಡಿದ್ರೆ ನ್ಯಾಯ ಸಿಗುತ್ತೆ ಎಂದಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

21 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

24 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago