ಬೆಂಗಳೂರು: 40% ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿಯೂ ಮುಂದುವರಿದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದ್ದಾರೆ.
ಚಾಮರಾಜಪೇಟೆಯ ಗುತ್ತಿಗೆದಾರರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಕರೆದಿರೋ ಪ್ಯಾಕೇಜ್ ಟೆಂಡರ್ ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು. ಜೊತೆಗೆ ಪ್ರತಿಯೊಂದು ಕಾಮಗಾರಿಗೂ ಪ್ರತ್ಯೇಕ ಟೆಂಡರ್ ಕರೆಯಬೇಕು ಎಂದು ಇದೇ ವೇಳೆ ಒತ್ತಾಯ ಮಾಡಿದರು.
ತಕ್ಷಣ ಪ್ಯಾಕೇಜ್ ಸಿಸ್ಟಮ್ ಸ್ಟಾಪ್ ಮಾಡಿ ಪ್ರತ್ಯೇಕ ಟೆಂಡರ್ ಕರೆಯಬೇಕು. ಕೋಲಾರದಲ್ಲಿ ಪ್ಯಾಕೇಜ್ ಟೆಂಡರ್ ಕರೆದಿದ್ದಾರೆ ಬೇರೆ ಜಿಲ್ಲೆಗಳಲ್ಲೂ ಕರೆದಿದ್ದಾರೆ. ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಶುರುವಾಗಿದೆ. ಅಧಿಕಾರಿಗಳು ದುಡ್ಡು ಕಲೆಕ್ಟ್ ಮಾಡಿ ರಾಜಕಾರಣಿಗಳಿಗೆ ಕೊಡುತ್ತಿದ್ದಾರೆ. ಈ ಹಿಂದೆ ರಾಜಕಾರಣಿಗಳು ನೇರವಾಗಿ ಕಮಿಷನ್ ತೆಗೆದುಕೊಳ್ಳುತ್ತಿದ್ದರು. ಈಗ ಅಧಿಕಾರಿಗಳು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ 40% ಕಮಿಷನ್ ಈಗಲೂ ಮುಂದುವರಿದಿದೆ ಎಂದು ದೂರಿದ್ದಾರೆ.
ಅರ್ಹ ಗುತ್ತಿಗೆದಾರರಿಗೆ ಅನ್ಯಾಯ: ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಅನಾವಶ್ಯಕ ಪ್ಯಾಕೇಜ್ ಟೆಂಡರ್ಗಳನ್ನು ಕೂಡಲೇ ಸರ್ಕಾರ ರದ್ದುಗೊಳಿಸಬೇಕು. ಈಗಾಗಲೇ ಹಲವು ಬಾರಿ ಸಿಎಂ ಅವರನ್ನ ಭೇಟಿ ಮಾಡಿದ್ದೇವೆ. ಪ್ಯಾಕೇಜ್ ಟೆಂಡರ್ ರದ್ದುಮಾಡುವಂತೆ ಮನವಿ ಮಾಡಿದ್ದೇವೆ. ಹತ್ತಾರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ್ದೇವೆ. ಮುಖ್ಯ ಎಂಜಿನಿಯರ್ ಅವರನ್ನ ಪ್ರಶ್ನೆ ಮಾಡಿದ್ರೆ ಮೇಲಾಧಿಕಾರಿಗಳ ಕಡೆ ತೋರಿಸುತ್ತಾರೆ. ಅವರನ್ನ ಕೇಳಿದ್ರೆ ಸಚಿವರು, ಶಾಸಕರ ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ ಎಂದರು.
ಪೊಲೀಸ್ ವಸತಿ ಗೃಹ ಅಭಿವೃದ್ಧಿ ನಿಗಮ, ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಲವು ಇಲಾಖೆಗಳಲ್ಲಿ ಪ್ಯಾಕೇಜ್ ಟೆಂಡರ್ ಆಹ್ವಾನ ಬಂದಿದೆ. ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಮೋಸಗಳಾಗುತ್ತಿದೆ. ನೆರೆ ರಾಜ್ಯದ ಗುತ್ತಿಗೆ ಅನಕೂಲ ಮಾಡಿಕೊಡಲು ಪ್ಯಾಕೇಜ್ ಟೆಂಡರ್ ಮಾಡುತ್ತಿದ್ದಾರೆ. ಪ್ಯಾಕೇಜ್ ಟೆಂಡರ್ ಪದ್ಧತಿ ಭ್ರಷ್ಟಾಚಾರಕ್ಕೆ ಆಸ್ಪದವಾಗಿದೆ. ತಮ್ಮ ಅಪ್ತರಾದ ಗುತ್ತಿಗೆ ಕಾಮಗಾರಿ ನೀಡಲು ಮುಂದಾಗಿದ್ದಾರೆ. ಇದರಿಂದ ಅರ್ಹ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಎಲ್ಲಾ ರೀತಿಯ ಕಾಮಗಾರಿಗಳ ಟೆಂಡರ್ ಮೂಲಕ ಹಂಚಿಕೆ ಮಾಡಿದ್ರೆ ನ್ಯಾಯ ಸಿಗುತ್ತೆ ಎಂದಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…